ಹೆಂಡತಿ & ಮಗುವಿನ ಜೊತೆ ಮಲಗಿದ್ದವನ ಕೊಚ್ಚಿ ಬರ್ಬರ ಹತ್ಯೆ; ಕಾರಣವೇನು?

newsics.com ಉಡುಪಿ: ಯುವಕನೊರ್ವನನ್ನು ದುಷ್ಕರ್ಮಿಗಳು ಕೊಚ್ಚಿ ಹತ್ಯೆ ಮಾಡಿರುವ ಘಟನೆ ಉಡುಪಿಯ ಪುತ್ತೂರಿನಲ್ಲಿ ನಡೆದಿದೆ. ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವಿನಯ್ ದೇವಾಡಿಗ (35) ಎಂಬ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆಗೈದಿದ್ದಾರೆ. ರಾತ್ರಿ ಸುಮಾರು 11 ಗಂಟೆಗೆ, ಮೂವರು ದುಷ್ಕರ್ಮಿಗಳು ವಿನಯ್ ಮನೆಗೆ ನುಗ್ಗಿದ್ದಾರೆ ಎನ್ನಲಾಗ್ತಿದೆ. ರಾತ್ರಿ ಬಾಗಿಲು ಬಡಿದ ದುಷ್ಕರ್ಮಿಗಳು ಮೊದಲು ಮನೆಯಲ್ಲಿ ವಿನಯ್ ಇದ್ದಾನಾ ಎಂದು ವಿಚಾರಿಸಿದ್ದರಂತೆ. ಸ್ನೇಹಿತರು ಇರಬಹುದು ಎಂದು ಮನೆಯವರು ಒಳಗೆ ಕರೆದುಕೊಂಡಿದ್ದಾರೆ. ಬಳಿಕ ಒಳಗೆ ಬಂದವರೇ ಏಕಾಏಕಿ ವಿನಯ್ ರೂಮಿಗೆ ನುಗ್ಗಿದ್ದಾರೆ. … Continue reading ಹೆಂಡತಿ & ಮಗುವಿನ ಜೊತೆ ಮಲಗಿದ್ದವನ ಕೊಚ್ಚಿ ಬರ್ಬರ ಹತ್ಯೆ; ಕಾರಣವೇನು?