newsics.com
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಾಳೆ ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅಸಂಖ್ಯಾತ ಜನರ ಹೋರಾಟ, ತ್ಯಾಗ, ಬಲಿದಾನದಿಂದ ಪಡೆದುಕೊಂಡ ಸ್ವಾತಂತ್ಯಕ್ಕೆ ಕಾರಣರಾದ ಎಲ್ಲರನ್ನೂ ಸದಾ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ.
ದೇಶಾದ್ಯಂತ ಭಾರತದ ಸ್ವಾತಂತ್ರ್ಯದ 75ರ ಅಮೃತ ಮಹೋತ್ಸವದ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರವು ಪ್ರತಿ ವರ್ಷ “ಹರ್ ಘರ್ ತಿರಂಗಾ” ಎಂಬ ಘೋಷ ವಾಕ್ಯದೊಂದಿಗೆ 2025ರ ಸ್ವಾತಂತ್ರ್ಯ ದಿನವನ್ನು ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ ಮತ್ತು ಅದರ ಸೆಲ್ಸಿ ಫೋಟೋವನ್ನು ದಿನಾಂಕ:13.08.2025 ರಿಂದ ದಿನಾಂಕ:15.08.2025 ರೊಳಗೆ Photo upload ಮಾಡುವಂತೆ, ಕ್ರಮವಹಿಸುವುದು ಎಂದು ತಿಳಿಸಿದ್ದಾರೆ.