newsics.com
ನವದೆಹಲಿ: ಕುಸ್ತಿಪಟು ಸಾಗರ್ಧನಕ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಕುಸ್ತಿ ಪದಕ ವಿಜೇತ ಸುಶೀಲ್ ಕುಮಾರ್ಗೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ಇನ್ನೊಂದು ವಾರದೊಳಗಾಗಿ ಪೊಲೀಸರಿಗೆ ಶರಣಾಗುವಂತೆ ಸೆಲಿಬ್ರಿಟಿ ಕುಸ್ತಿಪಟುವಿಗೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.
2021ರ ಮೇನಲ್ಲಿ ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ನಡೆದಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿತ್ತು.
ಈ ಪ್ರಕರಣದಲ್ಲಿ ಸುಶೀಲ್ ಕುಮಾರ್ ಬಂಧನವಾಗಿತ್ತು. ಅಂದಿನಿಂದ ಜೈಲಿನಲ್ಲಿದ್ದ ಸುಶೀಲ್ಗೆ ಕಳೆದ ಮಾ.4ರಂದು ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.
ಇದನ್ನು ಪ್ರಶ್ನಿಸಿ ಸಾಗರ್ ತಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ, ಶರಣಾಗುವಂತೆ ತಿಳಿಸಿದೆ.
ಭಾರತದ ದಿಗ್ಗಜ ಕುಸ್ತಿಪಟುವಾಗಿ ಗುರುತಿಸಿಕೊಂಡಿದ್ದ ಸುಶೀಲ್ ಕುಮಾರ್ 2012ರ ಒಲಿಂಪಿಕ್ಸ್ನಲ್ಲಿ ಬೆಳ್ಳಿ, 2008ರ ಒಲಿಂಪಿಕ್ಸ್ನಲ್ಲಿ ಕಂಚು ಗೆದ್ದಿದ್ದಾರೆ.
Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ