newsics.com
ಮೈಸೂರು: ಕುಡಿತಕ್ಕೆ ಹಣ ನೀಡದ ಕಾರಣಕ್ಕೆ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಗಾಯತ್ರಿ ಕೊಲೆಯಾದವರು. ಪಾಪಣ್ಣ ಪತ್ನಿ ಕೊಲೆ ಆರೋಪಿ. ಪಾಪಣ್ಣ ರಿಯಲ್ ವಹಿವಾಟು ನಡೆಸುತ್ತಿದ್ದ. ಸಾಲಗಾರನಾಗಿ ಕುಡಿತದ ಚಟಕ್ಕೆ ದಾಸನಾಗಿದ್ದ.
ಹಣಕ್ಕಾಗಿ ಪತ್ನಿ ಮಕ್ಕಳನ್ನು ಪೀಡಿಸುತ್ತಿದ್ದ. ಅಷ್ಟೆ ಅಲ್ಲ, ಜಮೀನು ಮಾರಿ ಹಣ ನೀಡುವಂತೆ ಹೆಂಡತಿಯನ್ನು ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಪತಿ, ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ
ಕೊಲೆ ಮಾಡಿ ಓಡಿ ಹೋಗುವಾಗ ಮಗನ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬಳಿಕ ವಿಜಯನಗರ ಪೊಲೀಸ್ ಠಾಣೆಗೆ ತಾಯಿಯನ್ನು ತಂದೆ ಕೊಲೆ ಮಾಡಿದ್ದಾರೆ ಎಂದು ಮಗ ದೂರು ಕೊಟ್ಟಿದ್ದಾನೆ. ದೂರಿನ ಅನ್ವಯ ಪಾಪಣ್ಣನನ್ನು ಬಂಧಿಸಿದ್ದಾರೆ.
World Record ವಿಶ್ವ ದಾಖಲೆ ಪುಟಕ್ಕೆ ಶಕ್ತಿ ಯೋಜನೆ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ ಸಂತಸ