newsics.com
ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸರ್ಕಾರದ ಈ ನಿರ್ಧಾರದಿಂದ ಕಳೆದ ಐದು ದಶಕದ ಕನಸು ನನಸಾಗಿದೆ. ಸದ್ಯದ ಮಾಹಿತಿ ಪ್ರಕಾರ, ಐದು ಗುಂಪುಗಳ ಬದಲಾಗಿ ಮೂರು ವರ್ಗವನ್ನು ಮಾಡುವುದಕ್ಕೆ ಸಚಿವ ಸಂಪುಟ ನಿರ್ಧಾರ ಮಾಡಿದೆ ಎನ್ನಲಾಗಿದೆ.
ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ 6% ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಈ ನಿರ್ಧಾರವನ್ನು ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ದಶಕಗಳಿಂದಲೂ ರಾಜಕೀಯವಾಗಿ ಬಿಸಿತುಪ್ಪವಾಗಿ ಪರಿಣಮಿಸಿದ್ದ ಒಳ ಮೀಸಲಾತಿ ವಿವಾದಕ್ಕೆ ರಾಜ್ಯ ಸರ್ಕಾರ ಕೊನೆಗೂ ಪರಿಹಾರ ಸೂಚಿಸಿದೆ.
ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರದ ಪ್ರಕಾರ, ಪರಿಶಿಷ್ಟ ಜಾತಿಯಲ್ಲಿರುವ ಎಡಗೈ ಮತ್ತು ಬಲಗೈ ಎರಡೂ ಸಮುದಾಯಗಳಿಗೆ ತಲಾ 6% ಮೀಸಲಾತಿ ನೀಡಲು ತೀರ್ಮಾನಿಸಿದೆ.
ಈ ನಿರ್ಧಾರವನ್ನು ಬುಧವಾರ(ಆ.20) ವಿಧಾನಸಭೆ ಅಧಿವೇಶನದಲ್ಲಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.
ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿಯು ಎಡಗೈ ಸಮುದಾಯಕ್ಕೆ 6% ಮತ್ತು ಬಲಗೈ ಸಮುದಾಯಕ್ಕೆ 5% ಮೀಸಲಾತಿ ನೀಡಲು ಶಿಫಾರಸು ಮಾಡಿತ್ತು. ಈ ಅಸಮ ಪ್ರಮಾಣವು ಬಲಗೈ ಸಮುದಾಯದ ತೀವ್ರ ಆಕ್ಷೇಪಣೆಗೆ ಕಾರಣವಾಗಿತ್ತು. ಆದರೆ, ಹೊಸ ತೀರ್ಮಾನದಂತೆ, 18 ಜಾತಿಗಳನ್ನು ಒಳಗೊಂಡಿರುವ ಎಡಗೈ ಸಮುದಾಯ ಮತ್ತು 20 ಜಾತಿಗಳನ್ನು ಒಳಗೊಂಡಿರುವ ಬಲಗೈ ಸಮುದಾಯಕ್ಕೆ ಸಮಾನ ಮೀಸಲಾತಿ ದೊರೆಯಲಿದೆ. ಉಳಿದಂತೆ, 63 ಜಾತಿಗಳಿಗೆ (ಬೋವಿ, ಲಂಬಾಣಿ ಕೊರಮ ಕೊರಚ) 5% ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ.
ಯಾವ ಜಾತಿ ಯಾವ ಸಮುದಾಯಕ್ಕೆ?
ದಲಿತ ಎಡಗೈ ಜಾತಿಗಳು:
ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ರೋಹಿತ್, ಸಮ್ಗರ್, ಹಕ್ಕಳಯ್ಯ, ಧೋರ್ಕ, ಹಕ್ಕಳಯ್ಯ, ಧೋರ್ಕಾ ಹಲಸ್ವರ, ಹಸ್ಲ, ಕಡಯ್ಯನ್, ಕೆಪ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ, ಸಾಂಬನ್
ದಲಿತ ಬಲಗೈ ಜಾತಿಗಳು
ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ.
5% ಮೀಸಲಾತಿ ಒಳಪಡುವ ಜಾತಿಗಳು
ಬಕುಡ, ಬಂಜಾರ, ಲಂಬಾಣಿ, ಲಂಬಾಡ, ಲಂಬಾಡಿ, ಲಮಾಣಿ, ಸುಗಾಲಿ, ಸುಕಾಲಿ; ಭೋವಿ, ಓಡ್, ಒಡ್ಡೆ, ವಡ್ಡರ, ವಡ್ಡರ, ವಡ್ಡರ, ವಡ್ಡರ, ಕಲ್ಲುವಡ್ಡರ, ಬೋವಿ (ಬೆಸ್ತರಲ್ಲದ), ಮಣ್ಣುವಡ್ಡರ; ಎಲ್ಲಮಾಳ್ವಾರ್, ಯೆಲ್ಲಮ್ಮಲವಾಂಡ್ಲು; ಕೊರಚ, ಕೊರಚಾರ್; ಕೊರಮ, ಕೊರವ, ಕೊರವರ; ಲಿಂಗಾಡರ್; ಮುಕ್ರಿ; ಮುಂಡಾಲ; ಪಂಬದ; ಸಪಾರಿ; ತಿರ್ಗರ್, ತಿರ್ಬಂದ.
ರಿಲಯನ್ಸ್ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ – ಶೇ 20 ರಷ್ಟು ಬೆಲೆ ಏರಿಕೆ