newsics.com
ನವದೆಹಲಿ : ಭಾರಿ ಮಳೆಗೆ ಕಟ್ಟಡದ ಒಂದು ಭಾಗ ಕುಸಿದು ಮೂವರು ಸಾವನ್ನಪ್ಪಿರುವ ಘಟನೆದೆಹಲಿಯ ದರಿಯಾಗಂಜ್ ಪ್ರದೇಶದ ಸದ್ಭಾವನಾ ಪಾರ್ಕ್ ಬಳಿ ನಡೆದಿದೆ
ಮೃತರನ್ನು ಜುಬೈರ್, ಗುಲ್ಸಾಗರ್ ಮತ್ತು ತೌಫಿಕ್ ಎಂದು ಗುರುತಿಸಲಾಗಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಸೇರಿದಂತೆ ನಾಗರಿಕ ಅಧಿಕಾರಿಗಳಿಗೆ ತಕ್ಷಣವೇ ಮಾಹಿತಿ ನೀಡಲಾಯಿತು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು.
ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಹೆಚ್ಚಿನ ಜನರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಯುತ್ತಿದೆ.