newsics.com
ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನೀರು ಬಿಡುಗಡೆಯಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ 40 ಕುಟುಂಬಗಳ ಜೊತೆಗೆ ತುಂಬು ಗರ್ಭಿಣಿ ಜತೆ ಹಲವು ರೋಗಿಗಳು ನಡುಗಡ್ಡೆಯಲ್ಲಿ ಸಿಲುಕಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ 40 ಕುಟುಂಬಗಳು ಸುಮಾರು ನೂರಕ್ಕೂ ಹೆಚ್ಚು ಜನರು ಹಾಗೂ ಜಾನುವಾರುಗಳು ನಡುಗಡ್ಡೆಯಲ್ಲಿ ಸಿಲುಕಿ ಜೀವಭಯದಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಕುಟುಂಬಗಳಲ್ಲಿ ತಂಬು ಗರ್ಭಿಣಿ ಹಾಗೂ ಪಾರ್ಶ್ವವಾಯುಪೀಡಿತ ರೋಗಿಗಳು ಕೂಡ ವಾಸಿಸಿದ್ದು” ನಡುಗಡ್ಡೆಯಲ್ಲಿ ಸಿಲುಕಿದ ನೆರೆ ಸಂತ್ರಸ್ತರಿಗೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳವಾಗಿದ್ದು, ತುಂಬು ಗರ್ಭಿಣಿ, ಪಾರ್ಶ್ವವಾಯು ಪೀಡಿತ ವ್ಯಕ್ತಿ ಸೇರಿದಂತೆ ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬಗಳು ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿವೆ.
ಪ್ರೀತಿ ನಿರಾಕರಿಸಿದಕ್ಕೆ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ
ಗುಂಡಿ ಬಿದ್ದ ಹೆದ್ದಾರಿಯಲ್ಲಿ ಟೋಲ್ ಶುಲ್ಕ ಸಂಗ್ರಹಿಸುವಂತಿಲ್ಲ – ಸುಪ್ರೀಂಕೋರ್ಟ್ ಮಹತ್ವದ ಆದೇಶ