newsics.com
ಉಡುಪಿ/ ಮಂಗಳೂರು: ಸಿಎಂ ಹಾಗೂ ಗೃಹಸಚಿವರ ವಿರುದ್ಧ ಮನಸೋಇಚ್ಛೆ ಮಾತಾಡಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ಶೆಟ್ಟಿ ತಿಮರೋಡಿಯವರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಎಎಸ್ಪಿ ಸುಧಾಕರ್ ನಾಯ್ಕ್ ನೇತೃತ್ವದ ತಂಡ ಬೆಳ್ತಂಗಡಿ ನಿವಾಸದಲ್ಲೇ ತಿಮರೋಡಿ ಅವರನ್ನು ಬಂಧಿಸಿದ್ದಾರೆ.
ಉಡುಪಿ ಗ್ರಾಮೀಣ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಅವರು ಫೇಸ್ಬುಕ್ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ವಿರುದ್ಧ ಅವಾಚ್ಯ ಮತ್ತು ಅಶ್ಲೀಲ ಭಾಷೆ ಬಳಸಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಅಲ್ಲದೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಹೊರಿಸಿದ್ದರು. ಗೃಹಸಚಿವರು ಗ್ರಹಚಾರ ಸಚಿವ ಎಂದು ಪರಮೇಶ್ವರ ಅವರನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ಬಂಧಿಸುವಂತೆ ಗೃಹಸಚಿವ ಪರಮೇಶ್ವರ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
24 ಕೊಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ತಿಮರೋಡಿ ಆರೋಪಿಸಿದ್ದ ಹಿಂದಿನ ವೀಡಿಯೊ ಕೂಡ ಟೀಕೆಗೆ ಗುರಿಯಾಗಿತ್ತು. ಈ ಹೇಳಿಕೆ ಕರ್ನಾಟಕ ವಿಧಾನಸಭೆಯಲ್ಲಿ ಕೋಲಾಹಲಕ್ಕೂ ಕಾರಣವಾಯಿತು. ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು. ಗೃಹ ಸಚಿವ ಜಿ. ಪರಮೇಶ್ವರ ಪೊಲೀಸರಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.