newsics.com
ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ.
ರಾಜ್ಯಾದ್ಯಂತ ಗಣೇಶ ಮೂರ್ತಿ ಸ್ಥಾಪನೆ, ವಿಸರ್ಜನೆ ವೇಳೆಯಲ್ಲಿ ಈ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸಿದೆ. ಒಂದು ವೇಳೆ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ.
ರಾಜ್ಯಾಧ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ / ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು.
ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸುವುದು.
ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳೊಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದು ಕಡ್ಡಾಯವಾಗಿದೆ.
ರಾತ್ರಿ 10.00 ರಿಂದ ಬೆ 6.00 ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಎರಡರಿಂದ ಮೂರು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ. ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸುವುದು.
ಆ.27 ರಿಂದ ಸೆ.15ರವರೆಗೆ ಜಿಲ್ಲಾದ್ಯಂತ ಬೈಕ್ ರ್ಯಾಲಿ, ಡಿ.ಜಿ. ಸಿಸ್ಟಂ ಬಳಕೆ ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್/ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಬಳಕೆ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ
Stress reliever basil ಒತ್ತಡ ನಿವಾರಣೆಗೆ ತುಳಸಿ ಪರಿಣಾಮಕಾರಿ ಮದ್ದು! ವಿಜ್ಞಾನಿಗಳ ಸಂಶೋಧನೆ
Popular judge Frank Caprio is no more ಜನಪ್ರಿಯ ನ್ಯಾಯಾಧೀಶ ಫ್ರಾಂಕ್ ಕ್ಯಾಪ್ರಿಯೋ ಇನ್ನಿಲ್ಲ