newsics.com
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟಿದ್ದೇನೆ ಎಂಬ ಅನಾಮಿಕದ ಕೇಸ್ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಎಸ್ ಐ ಟಿ ಇಂದು ದೂರುದಾರ ಮಾಸ್ಕ್ ಮ್ಯಾನ್ ಬಂಧಿಸಿದ್ದಾರೆ
ಧರ್ಮಸ್ಥಳದಲ್ಲಿ ನೂರಾರು ಶವ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಳಗ್ಗೆ 10 ಗಂಟೆಯಿಂದ ಇಂದು ಬೆಳಗ್ಗೆವರೆಗೆ ಮಾಸ್ಕ್ ಮ್ಯಾನ್ ನ ತೀವ್ರ ವಿಚಾರಣೆ ನಡೆಸಲಾಗಿತ್ತು. ಈ ಅನಾಮಿಕ ವ್ಯಕ್ತಿ ಧರ್ಮಸ್ಥಳದಲ್ಲಿ 100ಕ್ಕೂ ಹೆಚ್ಚು ಶವಗಳನ್ನು ತಾನೇ ಹೂತಿಟ್ಟಿದ್ದೇನೆ ಎಂದು ದೂರಿನಲ್ಲಿ ಆರೋಪಿಸಿದ್ದ, ಆದರೆ ತನಿಖೆಯಲ್ಲಿ ಈ ಆರೋಪಗಳು ಸತ್ಯಕ್ಕೆ ದೂರ ಎಂಬುದು ತಿಳಿದು ಬಂದಿದೆ.
ತನಿಖೆಯ ಸಂದರ್ಭದಲ್ಲಿ, ಮಾಸ್ಕ್ಮ್ಯಾನ್ನ ದೂರು ಧರ್ಮಸ್ಥಳದ ಕ್ಷೇತ್ರದ ವಿರುದ್ಧ ದುರುದ್ದೇಶಪೂರಿತವಾಗಿತ್ತು ಎಂಬುದು ಸ್ಪಷ್ಟವಾಗಿದೆ ಎನ್ನಲಾಗಿದ್ದು ಎಸ್ಐಟಿ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. ಆತನು ತಾನು ಸೂಚಿಸಿದ ಸ್ಥಳಗಳಲ್ಲಿ ಶವಗಳಿವೆ ಎಂದು ಆರೋಪಿಸಿದ್ದರೂ, ತನಿಖೆಯಲ್ಲಿ ಯಾವುದೇ ಗಣನೀಯ ಸಾಕ್ಷ್ಯ ಸಿಗಲಿಲ್ಲ. ಈ ಆರೋಪಗಳು ಕೆಲವು ಗುಂಪುಗಳಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲ್ಪಟ್ಟಿವೆ ಎಂದು SIT ಶಂಕಿಸಿದೆ.