newsics.com
ಕಲಬುರಗಿ: ನೆರೆಯ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಜ್ಜನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದ್ದು, ಇದರಿಂದಾಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದ ಯಲ್ಲಮ್ಮದೇವಿಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ.
ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆ ಯಿಂದಾಗಿ ಅಲ್ಲಿಯ ಉಜ್ಜನಿ ಜಲಾಶಯದಿಂದ ಸುಮಾರು 1.80 ಲಕ್ಷ ಕ್ಯುಸೆಕ್ ನೀರು ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ಮೂಲಕ, ಜಿಲ್ಲೆಯ ಭೀಮಾ ನದಿಗೆ ಹರಿಬಿಟ್ಟಿದ್ದರಿಂದ ಯಲ್ಲಮ್ಮನ ದೇವಸ್ಥಾನ ಅರ್ಧದಷ್ಟು ಜಲಾವೃತಗೊಂಡಿದ್ದು, ದೇವಲ ಗಾಣಗಾಪುರ ಹಾಗೂ ಘತ್ತರಗಿ ಸೇತುವೆ ಮುಳುಗುವ ಹಂತ ತಲುಪಿದೆ.
ಉಜ್ಜನಿ ಜಲಾಶಯದಿಂದ ನೀರು ಹರಿಬಿಡುತ್ತಿರುವುದರಿಂದ ಜಿಲ್ಲೆಯ ಭೀಮಾ ನದಿಯಲ್ಲಿ ಒಳಹರಿವು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಕ್ಕಪಕ್ಕದ ಗ್ರಾಮಗಳಿಗೂ ನೀರು ನುಗ್ಗುವ ಭೀತಿ ಎದುರಾಗಿದೆ. ನಿರಂತರವಾಗಿ ಭೀಮೆಯ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಸೂಚನೆ ನೀಡಿದ್ದಾರೆ.
KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ – ಬುಕ್ಕಿಂಗ್ ಗೆ ಶೇ.10ರಷ್ಟು ರಿಯಾಯಿತಿ