newsics.com
ಬೆಂಗಳೂರು: ಇ-ಚಲನ್ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ರಾಜ್ಯ ಸರ್ಕಾರ 50% ರಿಯಾಯಿತಿ ಘೋಷಿಸಿದೆ.
ಒಂದು ಬಾರಿಯ ರಿಯಾಯಿತಿಯನ್ನು ನೀಡಲಾಗಿದ್ದು, ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ರಿಯಾಯಿತಿ ಇರಲಿದೆ. ಆದರೆ ಈ ರಿಯಾಯಿತಿಯು 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪಾವತಿ ಹೇಗೆ?
ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್ಸೈಟ್ನಲ್ಲಿ ವಾಹನದ ನೋಂದಣಿ ಸಂಖ್ಯೆಯನ್ನು ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ತಿಳಿದುಕೊಳ್ಳಬಹುದು.
ಬಳಿಕ ಪಾವತಿಸಲು ಇಚ್ಛಿಸುವ ದಂಡದ ಮೊತ್ತವನ್ನು ಆಯ್ಕೆ ಮಾಡಿದರೆ, ರಿಯಾಯಿತಿ ಮೊತ್ತದ ಪಾವತಿಯ ಆಯ್ಕೆ ಲಭ್ಯವಾಗುತ್ತದೆ. ನಂತರ ದಂಡದ ಮೊತ್ತ ಪಾವತಿಸಬಹುದು.
ಇದಲ್ಲದೆ ಅಲ್ಲದೇ ಹತ್ತಿರದ ಸಂಚಾರ ಪೊಲೀಸ್ ಠಾಣೆಗಳು, ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ನೀಡುವ ಮೂಲಕವೂ ಸಹ ದಂಡ ಪಾವತಿಸಬಹುದು.
ಒಂದು ವೇಳೆ ತಪ್ಪಾಗಿ ದಂಡ ವಿಧಿಸಲಾಗಿದ್ದರೆ, ಮರುಪರಿಶೀಲನೆಯ ದೂರನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು ಅಥವಾ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ದೂರು ಸಲ್ಲಿಸುವ ಮೂಲಕವೂ ಸರಿಪಡಿಸಿಕೊಳ್ಳಬಹುದು.
Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್… ಮದುವೆ ಪತ್ರಿಕೆ ಇಲ್ಲಿದೆ ನೋಡಿ