Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಶಾಲೆ ಶಿಕ್ಷಕನ ಕೊ*ಲೆ: ಪತ್ನಿ,‌ ಪ್ರಿಯಕರನಿಗೆ ಮರಣದಂಡನೆ
ಕರ್ನಾಟಕಪ್ರಮುಖ

ಸರ್ಕಾರಿ ಶಾಲೆ ಶಿಕ್ಷಕನ ಕೊ*ಲೆ: ಪತ್ನಿ,‌ ಪ್ರಿಯಕರನಿಗೆ ಮರಣದಂಡನೆ

Share
1 Min Read
SHARE

newsics.com

ಶಿವಮೊಗ್ಗ: ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿದ ಆರೋಪ ಸಾಬೀತಾದ ಕಾರಣ ಮೃತರ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ವಿಧಿಸಿ ಭದ್ರಾವತಿಯ ನಾ‌ಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ ಶಿಕ್ಷಕ ಇಮ್ತಿಯಾಜ್ ಅಹಮದ್ ಅವರನ್ನು ಕೊಲೆ ಮಾಡಿ ಮೃತದೇಹವನ್ನು ನೈಲಾನ್ ದಾರದಲ್ಲಿ ಕಟ್ಟಿ ಭದ್ರಾವತಿಯ ಹೊಸಸೇತುವೆ ಸಮೀಪ ಭದ್ರಾ ನದಿಯಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ನ್ಯೂಟೌನ್ ಠಾಣೆ ಪೊಲೀಸರು ಇಮ್ತಿಯಾಜ್ ಪತ್ನಿ, ಶಿಕ್ಷಕಿ ಲಕ್ಷ್ಮಿ (29), ಆಕೆಯ ಪ್ರಿಯಕರ, ಜನ್ನಾಪುರದ ಎನ್‌.ಟಿ.ರಸ್ತೆಯ ನಿವಾಸಿ ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ (30) ಹಾಗೂ ಈತನ ಸ್ನೇಹಿತ ಶಿವರಾಜ್ ಅಲಿಯಾಸ್ ಶಿವು (32) ಎಂಬುವರನ್ನು ಬಂಧಿಸಿದ್ದರು.

ಇಮ್ತಿಯಾಜ್ ಹಾಗೂ ಲಕ್ಷ್ಮಿ ಪ್ರೀತಿಸಿ ವಿವಾಹವಾಗಿದ್ದರು. ನಂತರ ಆಕೆ, ಬಾಲ್ಯ ಸ್ನೇಹಿತ, ಚಾಲಕನಾಗಿದ್ದ ಕೃಷ್ಣಮೂರ್ತಿ ಜತೆ ಸ್ನೇಹ ಬೆಳೆಸಿದ್ದಳು. ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಪತ್ನಿಯು ಪ್ರಿಯಕರನ ಜತೆ ಸಲುಗೆಯಿಂದ ಇರುವುದನ್ನು ಇಮ್ತಿಯಾಜ್ ವಿರೋಧಿಸಿದ್ದ. ಹೀಗಾಗಿ ಜನ್ನಾಪುರದ ಮನೆಯಲ್ಲಿ ಅವರ ತಲೆಗೆ ರಾಡ್ ಮತ್ತು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದರು.

ತನಿಖೆ ನಡೆಸಿದ್ದ ಭದ್ರಾವತಿ ನಗರ ವಿಭಾಗದ ಆಗಿನ ಇನ್‌ಸ್ಪೆಕ್ಟರ್‌ಗಳಾದ ಪ್ರಭು ಬಿ.ಸೂರಿನ್ ಹಾಗೂ ಟಿ.ಕೆ.ಚಂದ್ರಶೇಖರ್ ನ್ಯಾಯಾಲಯಕ್ಕೆ ದೋಷಾರೋಪ‍ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್‌ ಅವರು ಲಕ್ಷ್ಮಿ ಹಾಗೂ ಕೃಷ್ಣಮೂರ್ತಿಗೆ ಮರಣದಂಡನೆ ಹಾಗೂ ಮತ್ತೊಬ್ಬ ಆರೋಪಿ ಶಿವರಾಜ್‌ಗೆ ಏಳು ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

TAGGED:lover sentenced to deathMur*der of government school teacher: Wife
Share This Article
Facebook Twitter Copy Link Print
Previous Article Tech info ಸಿಗ್ನಲ್ ಇಲ್ಲದಿದ್ದರೇನಂತೆ… ಈ‌ ಫೋನ್‌ನಲ್ಲಿ ಕರೆ‌ ಮಾಡಬಹುದಂತೆ… ಗೂಗಲ್ ಹೇಳ್ತಿರೋದೇನು?
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 25-08-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?