newsics.com
ಚಾಮರಾಜನಗರ: ಗೌರಿ ಗಣೇಶ ಹಬ್ಬಕ್ಕೆ ತನ್ನನ್ನು ಕರೆಯಲು ತವರು ಮನೆಯಲ್ಲಿ ಯಾರೂ ಇಲ್ಲ ಎನ್ನುವ ಕಾರಣಕ್ಕೆ ಮನನೊಂದಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನೆಯಲ್ಲಿ ಈ ಘಟನೆ ನಡೆದಿದೆ.
ಜೀವನದಲ್ಲಿ ಭಾರೀ ಜಿಗುಪ್ಸೆಗೊಂಡಿದ್ದ ಗೃಹಿಣಿ, ಹಬ್ಬಕ್ಕೆ ತವರು ಮನೆಗೆ ಹೋಗಿ ಸಂಭ್ರಮಪಡುವ ಖುಷಿಯಲ್ಲಿದ್ದಳು. ಆದರೆ, ತವರು ಮನೆಯಿಂದ ಯಾವುದೇ ಆಹ್ವಾನ ಬಾರದ ಕಾರಣ ಮನನೊಂದು ಈ ಕೃತ್ಯ ಎಸಗಿದ್ದಾಳೆ.
ರಶ್ಮಿ (26) ಜೀವ ಕಳೆದುಕೊಂಡ ಮಹಿಳೆ. ಮಧುವನಹಳ್ಳಿ ಗ್ರಾಮದ ಸಿದ್ದರಾಜು ಅವರನ್ನು ಈಕೆ ವಿವಾಹವಾಗಿದ್ದಳು.
ಈಕೆಯ ತಂದೆ, ತಾಯಿ ಹಾಗೂ ಅಣ್ಣ ಈಗಾಗಲೇ ಸಾವು ಕಂಡಿದ್ದಾರೆ. ತವರಿಗೆ ಕರೆದು ಅರಿಶಿನ-ಕುಂಕುಮ ಕೊಡಲು ಯಾರೂ ಇಲ್ಲ ಎನ್ನುವ ಕಾರಣಕ್ಕೆ ಆಕೆ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಳು.
ಇದರಿಂದಾಗಿ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.