newsics.com
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ತುಂಗುದಾಣಕ್ಕೆ ನುಗ್ಗಿ ಬಸ್ಗಾಗಿ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದು ಮಗು ಸೇರಿ ಒಂದೇ ಕುಟುಂಬದ ಐವರು ಮತ್ತು ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ನಡೆದಿದೆ.
ಸದ್ಯ ಮೃತ ಯಾರ ಗುರುತು ಪತ್ತೆ ಆಗಿಲ್ಲ. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ