newsics.com
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ ಅವರು ಕೆಳ ಹಂತದ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ದರ್ಶನ್ ಅವರು ದಿಂಬು-ಹಾಸಿಗಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಇಬ್ಬರ ಅರ್ಜಿ ವಿಚಾರಣೆಯ ತೀರ್ಪು ಸೆಪ್ಟೆಂಬರ್ 2ಕ್ಕೆ ಹೊರ ಬೀಳಲಿದೆ.
ದರ್ಶನ್ ಅವರಿಗೆ ವಿಶೇಷ ಸವಲತ್ತು ನೀಡದಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ನಿಯಮದಲ್ಲಿರುವಂತೆ ಒಂದು ಬೆಡ್ಶೀಟ್ ಮಾತ್ರ ನೀಡಲಾಗಿದೆ ಎನ್ನಲಾಗಿದೆ. ಹೆಚ್ಚುವರಿಯಾಗಿ ಯಾವುದೇ ಬೆಡ್ಶೀಟ್ ಕೊಟ್ಟಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಆಗಿದೆ.
‘ನಾವು ದರ್ಶನ್ಗೆ ಮನೆ ಊಟ ಕೇಳುತ್ತಿಲ್ಲ. 5 ಸ್ಟಾರ್ ಅನುಕೂಲ ಕೂಡ ಬೇಕು ಎಂದು ಹೇಳುತ್ತಿಲ್ಲ. ದರ್ಶನ್ಗೆ ಬೆಡ್ಶಿಟ್, ದಿಂಬು ಕೊಡುತ್ತಿಲ್ಲ. ಕೋರ್ಟ್ನಿಂದ ನಿರ್ದೇಶನ ತನ್ನಿ ಎಂದಿದ್ದಾರೆ’ ಎಂದು ದರ್ಶನ್ ಪರ ವಕೀಲ್ ಸುನೀಲ್ಕುಮಾರ್ ಸೆಶನ್ ಕೋರ್ಟ್ ನಲ್ಲಿ ವಾದ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಮುಂದಕ್ಕೆ ಹಾಕಲಾಗಿದೆ. ಇನ್ನು, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಅರ್ಜಿ ಸಲ್ಲಿಕೆ ಆಗಿತ್ತ. ಇದರ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ ಆಗಿದೆ.
‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಅನುಶ್ರೀ ಹೇಳಿದ್ದೇನು?