newsics.com
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸುತ್ತಿದ್ದ ಭಕ್ತರೊಬ್ಬರು ಕುಸಿದು ಮೃತಪಟ್ಟ ಘಟನೆ ನಡೆದಿದೆ.
ಮೆರವಣಿಗೆಯಲ್ಲಿ ಉತ್ಸಾಹದಿಂದ ನೃತ್ಯ ಮಾಡುತ್ತಿದ್ದ ಲಕ್ಷ್ಮೀಪತಿ (40) ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಗ್ರಾಮದಲ್ಲಿ ಗಣೇಶನ ಮೂರ್ತಿ ವಿಸರ್ಜನೆ ಮೆರವಣಿಗೆ ಅದ್ದೂರಿಯಾಗಿ ನಡೆಯುತ್ತಿತ್ತು. ನಾಗವಲ್ಲಿ ಎಂಬ ಹಾಡಿಗೆ ಲಕ್ಷ್ಮೀಪತಿ ಅವರು ಉತ್ಸಾಹದಿಂದ ನೃತ್ಯ ಮಾಡುತ್ತಿದ್ದರು. ಭಕ್ತಿ ಮತ್ತು ಸಂಭ್ರಮದಲ್ಲಿ ತಲ್ಲೀನರಾಗಿದ್ದ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವೈದ್ಯರ ಪ್ರಯತ್ನ ಫಲಕಾರಿಯಾಗಲಿಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ.
ಅಪ್ರಾಪ್ತರ ಲವ್: ಮೊರಾರ್ಜಿ ಶಾಲೆಯಲ್ಲಿದ್ದಾಗ ಪ್ರೇಮಾಂಕುರ, ಈಗ ಆಕೆ ಗರ್ಭಿಣಿ, ಪೋಕ್ಸೊ ಕೇಸ್ ದಾಖಲು