newsics.com
ಬ್ರಹ್ಮಾವರ: ಪತಿಯ ಬಂಧನ ಭೀತಿಯಿಂದ ಪತ್ನಿಯು ಒಂದೂವರೆ ವರ್ಷದ ಮಗುವನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಸುಶ್ಮಿತಾ (23) ಮತ್ತು ಮಗು ಶ್ರೇಷ್ಠಾ ಮೃತಪಟ್ಟವರು. ಮನೆಯ ಚಾವಡಿಯಲ್ಲಿ ಮೊದಲು ಮಗುವಿಗೆ ನೇಣು ಬಿಗಿದು ಅನಂತರ ಸಮೀಪದಲ್ಲೇ ತಾನೂ ನೇಣು ಬಿಗಿದುಕೊಂಡಿದ್ದಾರೆ.
16 ವರ್ಷಗಳ ಹಿಂದಿನ ಪ್ರಕರಣ:
16 ವರ್ಷಗಳ ಹಿಂದೆ ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಪತಿ ಸುಭಾಷ್ ನಾಯ್ಕ ಹಾಗೂ ಅವರ ಸಹೋದರ ಸಹಿತ 6 ಮಂದಿಯ ಬಂಧನಕ್ಕೆ ನ್ಯಾಯಾಲಯ ಆದೇಶಿಸಿತ್ತು. ಈ ಕುರಿತು ಪದೇ ಪದೆ ಮನೆಗೆ ಪೊಲೀಸರು ಆಗಮಿಸಿ ನೋಟಿಸು ನೀಡುವುದು ಮತ್ತು ಬೆದರಿಕೆ ಹಾಕಿದ್ದಾರೆಂಬ ಕಾರಣದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿ ಡೆತ್ನೋಟ್ ಪತ್ತೆ:
2009ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪತಿ ಹಾಗೂ ಮನೆಯವರು ತಪ್ಪಿತಸ್ಥರು ಎನ್ನುವುದಾಗಿ ಇತ್ತೀಚೆಗೆ ಹೈಕೋರ್ಟ್ನಲ್ಲಿ ದೃಢೀಕರಣಗೊಂಡಿದೆ. ಇದೇ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಥಳದಲ್ಲಿ ಡೆತ್ನೋಟ್ ದೊರಕಿದ್ದು, ಘಟನೆಗೆ ನಾನೇ ಹೊಣೆಗಾರರಾಗಿದ್ದೇವೆ ಎನ್ನುವ ರೀತಿಯಲ್ಲಿ ಬರೆದಿದ್ದಾರೆ. ಬೇರೆ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತನಿಖೆಯಿಂದ ತಿಳಿಯಲಿದೆ.
ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟು!