newsics.com
ರಾಯ್ಪುರ: ಅಣೆಕಟ್ಟಿನ ಒಂದು ಭಾಗ ಕುಸಿದು ನಾಲ್ವರು ಜನರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿರುವ ಘಟನೆ ಛತ್ತೀಸ್ಗಢದ ಬಲರಾಂಪುರ ಜಿಲ್ಲೆಯಲ್ಲಿ ನಡೆದಿದೆ.
1980 ರ ದಶಕದ ಆರಂಭದಲ್ಲಿ ನಿರ್ಮಿಸಲಾದ ಈ ಜಲಾಶಯದ ನೀರು, ಒಡಕಿನ ಮೂಲಕ ಹತ್ತಿರದ ಮನೆಗಳು ಮತ್ತು ಕೃಷಿ ಹೊಲಗಳಿಗೆ ಇಳಿದು, ದಿಢೀರ್ ಪ್ರವಾಹಕ್ಕೆ ಕಾರಣವಾಗಿದೆ.
ಮೂವರು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರ.
ಮಾಹಿತಿ ತಿಳಿದ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಲ್, ಇನ್ನೂಮೂವರು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಧನೇಶ್ಪುರ ಗ್ರಾಮದಲ್ಲಿರುವ ಲೂಟಿ ಜಲಾಶಯದಲ್ಲಿ ಮಂಗಳವಾರ ತಡರಾತ್ರಿ ಈ ಪ್ರದೇಶದಲ್ಲಿ ಭಾರಿ ಮಳೆಯಾದ ನಂತರ ನೀರು ಒಡೆದಿದೆ ಎಂದು ಅವರು ಹೇಳಿದರು.