newsics.com
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಆತಂಕ ಮನೆ ಮಾಡಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದ ಆವರಣದಲ್ಲಿ ಕಾಂಪೌಂಡ್ ಬಳಿ ಕರಡಿ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗಳ ಮೊಬೈಲ್ ನಲ್ಲಿ ಕರಡಿ ಓಡಾಟದ ದೃಶ್ಯ ಸೆರೆಯಾಗಿದೆ.
ನಟ ದರ್ಶನ್ ಇರುವ ಸೆಲ್ ನ ಕಾಂಪೌಂಡ್ ಬಳಿ ಕರಡಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಕರಡಿ ಕಾಣಿಸಿಕೊಂಡ ಹಿನ್ನೆಲೆ ಎಚ್ಚರಿಕೆಯಿಂದ ಇರುವಂತೆ ಜೈಲಿನ ಅಧಿಕಾರಿಗಳು ಸೂಚನೆ ನೀಡಿದ್ದಾರೆ.