newsics.com
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ತಲೆಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.ಇದೀಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ಗೆ ಸಂಕಷ್ಟ ಎದುರಾಗಿದೆ.
ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ ಪ್ರಸ್ತಾಪಿಸಿತ್ತು ಎಂಬ ಸ್ಫೋಟಕ ಮಾಹಿತಿ ಎಸ್ಐಟಿ ತನಿಖೆ ವೇಳೆ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ದೊರೆತಂತಾಗಿದೆ.
ತಲೆಬುರುಡೆಯನ್ನು ಕೊಟ್ಟಿದ್ದು ಜಯಂತ್. ತಾನು ಅದನ್ನು ಧರ್ಮಸ್ಥಳದಿಂದ ತಂದೇ ಇಲ್ಲವೆಂದು ಚೆನ್ನಯ್ಯ ಎಸ್ಐಟಿ ಮುಂದೆ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ, ಜಯಂತ್ ಮಾತ್ರ ಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ಕೊಟ್ಟಿದ್ದು ಎಂದಿದ್ದಾರೆ. ಮಟ್ಟಣನವರ್ ನಿರಾಕರಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ಕೇರಳ ಸಂಸದನ ಹೆಸರು ಪ್ರಕರಣದಲ್ಲಿ ಮುನ್ನಲೆಗೆ ಬಂದಿದೆ
ತಲೆಬುರುಡೆ ಪ್ರಕರಣ ಹಾಗೂ ಒಟ್ಟಾರೆ ಧರ್ಮಸ್ಥಳ ಪ್ರಕರಣವನ್ನು ಎಸ್ಐಟಿ ಪೊಲೀಸರು ಈವರೆಗೆ ಒಟ್ಟು 11 ಸೆಕ್ಷನ್ಗಳ ಅಡಿ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.