newsics.com
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಜನ್ನತ್ ಗಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆ ಬಾಲಕರಿಬ್ಬರು ಉಗಿದ ವೀಡಿಯೋ ವೈರಲ್ ಆಗಿದೆ.
ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಚಿಕ್ಕ ಮಕ್ಕಳು ತಿಳಿಯದೆ ಹೀಗೆ ಮಾಡಿದ್ದಾರೆ. ಅವರ ಪರವಾಗಿ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಪೋಷಕರು ಕ್ಷಮೆ ಯಾಚಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಭಾನುವಾರ ಜನ್ನತ್ ಗಲ್ಲಿಯ ಗಣಪತಿ ಮೂರ್ತಿಯನ್ನು ರಾಜಬೀದಿಯಲ್ಲಿ ಉತ್ಸವದ ಮೂಲದ ವಿಸರ್ಜನೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು.
ಈ ವೇಳೆ ಅನ್ಯಕೋಮಿನ ಬಾಲಕರಿಬ್ಬರು ಮನೆಯ ಮೇಲಿನಿಂದ ಉಗಿಯುತ್ತಿರುವ ವೀಡಿಯೋ ವೈರಲ್ ಆಗಿದೆ.
ಹಿಂದೂ ಪರ ಸಂಘಟನೆಗಳಿಂದ ಸ್ಥಳದಲ್ಲಿಯೇ ಪ್ರತಿಭಟನೆಯನ್ನು ನಡೆಸಲಾಯಿತು. ಗಣೇಶ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೂ ಒತ್ತಾಯಿಸಲಾಯಿತು.
ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ವೈರಲ್ ಆಗಿರುವ ವೀಡಿಯೋದಲ್ಲಿ ಇಬ್ಬರು ಬಾಲಕರಲ್ಲಿ ಓರ್ವ ಮೆರವಣಿಗೆಯ ಮೇಲೆ ಉಗಿದಿರುವುದು ಕಂಡುಬಂದಿದೆ. ಆ ಇಬ್ಬರು ಮಕ್ಕಳನ್ನು ಸೆಕ್ಯೂರ್ ಮಾಡಲಾಗಿದೆ. ಈ ಘಟನೆಯ ಬಗ್ಗೆ ಮಕ್ಕಳ ಪೋಷಕರು ಕ್ಷಮೆಯಾಚಿಸಿದ್ದಾರೆ ಎಂದರು.
ಈಗಾಗಲೇ ಹಿಂದೂಪರ ಸಂಘಟನೆಯ ಮುಖಂಡರಿಗೂ ವಿಷಯವನ್ನು ಮನವರಿಕೆ ಮಾಡಿಕೊಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಶೌಚಾಲಯಕ್ಕೆ ಹೋಗಲು ಅನುಮತಿ ಕೇಳಿದ 2ನೇ ತರಗತಿ ಬಾಲಕಿಗೆ ಥಳಿತ, 100 ಬಸ್ಕಿ ಶಿಕ್ಷೆ
ನನ್ನದು 40 ಎಕರೆ ಬೆಳೆ ಹಾಳಾಯ್ತು, ನಾನ್ಯಾರ ಹತ್ರ ಹೇಳಲಿ… ಯುವ ರೈತನ ಮೇಲೆ ರೇಗಾಡಿದ ಮಲ್ಲಿಕಾರ್ಜುನ ಖರ್ಗೆ
ರೈಲಿನಲ್ಲೇ ಫುಲ್ ರೊಮ್ಯಾನ್ಸ್, ಸುತ್ತ ಪ್ರಯಾಣಿಕರಿದ್ದರೂ ಮೈಮರೆತ ಯುವ ಜೋಡಿ, ವೈರಲ್ ವಿಡಿಯೋ ನೋಡಿ