newsics.com
ವಿಜಯಪುರ: ಲವರ್ ಜತೆ ಸೇರಿ ಗಂಡನನ್ನೇ ಕೊಲೆ ಮಾಡಲು ಯತ್ನಿಸಿದ ಪತ್ನಿ ಸಿಕ್ಕಿಬಿದ್ದಿದ್ದಾಳೆ.
ಸುನಂದಾ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ತನ್ನ ಪ್ರಿಯಕರನ ಜತೆ ಸೇರಿ ತಾಳಿ ಕಟ್ಟಿದ ಗಂಡ ಭೀರಪ್ಪ ಪೂಜಾರಿಯನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ.
ಜಿಲ್ಲೆಯ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಈ ಘಟನೆ ನಡೆದಿದೆ.
ರಾತ್ರಿ ಮಲಗಿದ್ದಾಗ ಪತಿಯ ಕತ್ತು ಮತ್ತು ಮರ್ಮಾಂಗ ಹಿಸುಕಿ ಕೊಲೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಭೀರಪ್ಪ ಪೂಜಾರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.
ಸೆಪ್ಟೆಂಬರ್ 1, 2025ರಂದು ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸುನಂದಾ ತನ್ನ ಪ್ರಿಯಕರ ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಸೇರಿ ಬೀರಪ್ಪ ಎದೆಯ ಮೇಲೆ ಕುಳಿತು ಕತ್ತು ಮತ್ತು ಮರ್ಮಾಂಗವನ್ನು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾಳೆ.
ಬೀರಪ್ಪ ಮಾಯಪ್ಪ ಪೂಜಾರಿ, ತನ್ನ ಪತ್ನಿ ಸುನಂದಾ ಮತ್ತು ಇಬ್ಬರು ಮಕ್ಕಳೊಂದಿಗೆ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದಾ, ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ.
ಈ ಸಂಬಂಧ ಮುಂದುವರಿಸಲು ಬೀರಪ್ಪನನ್ನು ಮುಗಿಸಲು ಸುನಂದಾ ಯೋಜನೆ ರೂಪಿಸಿದ್ದಳು. ಅದರಂತೆ ಸೆಪ್ಟೆಂಬರ್ 1ರಂದು ರಾತ್ರಿ ಮನೆಯಲ್ಲಿ ಭೀರಪ್ಪ ಮಲಗಿದ್ದ ವೇಳೆ ಸುನಂದಾ ತನ್ನ ಪ್ರಿಯಕರನ ಜತೆಗೆ ಮತ್ತೊಬ್ಬ ವ್ಯಕ್ತಿಯನ್ನು ಕರೆದು ಕೊಲ್ಲಲು ಪ್ರಯತ್ನಿಸಿದ್ದಾಳೆ.
ಸುನಂದಾಳ ಪ್ರಿಯಕರ ಮತ್ತು ಆತನ ಸ್ನೇಹಿತ ಮನೆಗೆ ಬಂದು ಮಲಗಿದ್ದ ಬೀರಪ್ಪ ಎದೆಯ ಮೇಲೆ ಕುಳಿತು ಕತ್ತು ಮತ್ತು ಮರ್ಮಾಂಗವನ್ನು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಸುನಂದಾ, ‘ಸಿದ್ದು, ಬಿಡಬೇಡ, ಖಲಾಸ್ ಮಾಡು’ ಎಂದು ಪ್ರಿಯಕರನಿಗೆ ಪ್ರೋತ್ಸಾಹಿಸಿದ್ದಾಳೆ.
ಆಗ ಬೀರಪ್ಪ ಎಚ್ಚರಗೊಂಡು ಕಾಲಿನಿಂದ ಕೂಲರ್ ಒದ್ದು ಶಬ್ದವಾದಾಗ, ಮನೆಯ ಮಾಲೀಕರು ಎಚ್ಚರಗೊಂಡಿದ್ದಾರೆ. ಈ ಶಬ್ದಕ್ಕೆ ತಕ್ಷಣವೇ ಬಾಗಿಲು ಬಡಿದಾಗ ಬೀರಪ್ಪನ 8 ವರ್ಷದ ಮಗ ಎದ್ದು ಬಾಗಿಲು ತೆರೆದಿದ್ದಾನೆ. ಬಳಿಕ ಸಿದ್ದಪ್ಪ ಮತ್ತು ಇನ್ನೊಬ್ಬ ಸಹಾಯಕ ಮನೆಯಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಬೀರಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭೀರಪ್ಪ ನೀಡಿದ್ದ ದೂರಿನ ಅನ್ವಯ ಸುನಂದಾಳನ್ನು ಇಂಡಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಆದರೆ, ಪ್ರೀಯಕರ ಪರಾರಿಯಾಗಿದ್ದಾನೆ.
ಪರಾರಿಯಾಗಿರುವ ಸುನಂದಾ ಪ್ರಿಯಕರ ಸಿದ್ಧಪ್ಪ ಅಜ್ಞಾತ ಸ್ಥಳದಿಂದ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಗಂಡನ ಹತ್ಯಗೆ ಸುನಂದಾ ಮಾಡಿದ್ದ ಪ್ಲ್ಯಾನ್ ಅನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಭೀರಪ್ಪನ ಹತ್ಯೆಗೆ ಸ್ಕೆಚ್ ಹಾಕಿದ್ದೇ ಸ್ವತಃ ಪತ್ನಿ ಸುನಂದಾ. ಆಕೆಯೇ ಹತ್ಯೆಗೆ ದಿನ ಹಾಗೂ ಟೈಂ ಫಿಕ್ಸ್ ಮಾಡಿದ್ದಳಂತೆ. ಆದರೀಗ ಪ್ರಕರಣದಲ್ಲಿ ತನ್ನನ್ನು ಮಾತ್ರ ಸಿಕ್ಕಿ ಹಾಕಿಸಲು ಪ್ಲಾನ್ ಸಹ ಮಾಡಿದ್ದಳು ಎಂದು ಪ್ರಿಯಕರ ವಿಡಿಯೋದಲ್ಲಿ ಹೇಳಿದ್ದಾನೆ.
ಇಬ್ಬರು ಸೇರಿಯೇ ಕೊಲೆಗೆ ಯತ್ನಿಸಿದ್ದೇವೆ. ಆದರೆ ಸುನಂದಾ ಹಾಗೂ ಆಕೆ ಅಣ್ಣ, ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ಸೇರಿ ನನ್ನೊಬ್ಬನನ್ನೆ ಕೊಲೆ ಕೇಸ್ನಲ್ಲಿ ಫಿಟ್ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಪೊಲೀಸರು ಇಬ್ಬರನ್ನು ಆರೋಪಿಗಳನ್ನಾಗಿ ಮಾಡಲಿ ಎಂದು ಆಗ್ರಹಿಸಿದ್ದಾನೆ.
ಈ ಸಂಬಂಧ ಇಂಡಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀಯಕರನಿಗಾಗಿ ಪತಿಯ ಕೊಲೆಗೆ ಸ್ಕೆಚ್ ಹಾಕಿ ಸಿಕ್ಕಿಬಿದ್ದವಳು ಜೈಲು ಸೇರಿದರೆ, ಪ್ರಿಯಕರ ಅಜ್ಞಾತ ಸ್ಥಳ ಸೇರಿ ವಿಡಿಯೋ ಮೂಲಕ ಪ್ರೀಯತಮೆ ವಿರುದ್ಧವೇ ಆರೋಪ ಮಾಡಿದ್ದಾನೆ.
ಜ್ವರವಿದ್ದಾಗ ಕಾಫಿ ಸೇವನೆ ಒಳ್ಳೆಯದಲ್ಲ ಏಕೆ?; ಈ ಬಗ್ಗೆ ತಜ್ಞರು ಹೇಳೋದೇನು?