newsics.com
ಕಠ್ಮಂಡು: ನೇಪಾಳದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪಕ್ಕೆ ತಿರುಗಿದ ಬೆನ್ನಲ್ಲೇ, ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ತನ್ನ ವಶಕ್ಕೆ ಪಡೆದಿದೆ.
ನೇಪಾಳ ರಾಜಧಾನಿ ಕಠ್ಮಂಡು ಸೇರಿದಂತೆ ವಿವಿಧ ನಗರಗಳಲ್ಲಿ ಇಂದು ಕೂಡ ಪ್ರತಿಭಟನೆ ಮುಂದುವರೆದಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ನವದೆಹಲಿ-ಕಠ್ಮಂಡು ನಡುವೆ ಪ್ರತಿ ದಿನ ಸಂಚರಿಸುವ ಏರ್ ಇಂಡಿಯಾ =ದ ೬ ವಿಮಾನಗಳು ರದ್ದಾಗಿವೆ, ಇಂಡಿಗೋ, ನೇಪಾಳ ಏರ್ ಲೈನ್ಸ್ ವಿಮಾನಗಳ ಹಾರಾಟವೂ ಸ್ಥಗಿತಗೊಳಿಸಲಾಗಿದೆ.
ಪ್ರತಿಭಟನಾಕಾರರು ಸರ್ಕಾರಿ ಕಟ್ಟಡ, ರಾಜಕೀಯ ನಾಯಕರ ನಿವಾಸಗಳನ್ನು ಬೆಂಕಿ ಹಚ್ಚಿರುವ ಹಿನ್ನೆಲೆಯಲ್ಲಿ ಸೇನೆ ಸರ್ಕಾರದ ಮುಖ್ಯ ಸಚಿವಾಲಯ ಕಟ್ಟಡವಾದ ಸಿಂಗ್ದರ್ಬಾರ್ ನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ.