newsics.com
ಮಂಡ್ಯ: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಕಿಂಗ್ಪಿನ್ ಯಾರು ಎಂಬುದು ಬಯಲಾಗಿದೆ.
ಚನ್ನಪಟ್ಟಣದ ಇರ್ಫಾನ್ ಎಂಬಾತನೇ ಕಲ್ಲು ತೂರಾಟದ ಕಿಂಗ್ಪಿನ್ ಎಂಬುದು ತಿಳಿದುಬಂದಿದೆ. ಈತ ಹಲವು ವರ್ಷಗಳಿಂದ ಮದ್ದೂರಿನಲ್ಲೇ ಇದ್ದು, ಮಸೀದಿ ಮುಂದೆ ಗಣೇಶ ಮೆರವಣಿಗೆ ಬಗ್ಗೆ ಅಸಮಾಧಾನಗೊಂಡಿದ್ದ. ಆತನನ್ನು ಜಾಫರ್ ಎಂಬಾತ ಪ್ರಚೋದಿಸಿದ್ದ ಎನ್ನಲಾಗಿದೆ.
ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧ ಇದುವರೆಗೆ ಒಟ್ಟು 29 ಆರೋಪಿಗಳ ಗುರುತು ಪತ್ತೆಯಾಗಿದೆ . ಮದ್ದೂರು ಕಲ್ಲು ತೂರಾಟ ಪ್ರಕರಣ ಸಂಬಂಧ ಈಗಾಗಲೇ 22 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ 7 ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮತ್ತೊಂದೆಡೆ ಮದ್ದೂರು ಬೂದಿಮುಚ್ಚಿದ ಕೆಂಡದಂತಿದ್ದು, ಪಟ್ಟಣದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.