newsics.com
ಬೆಂಗಳೂರು: ರಾಜದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದಿನಿಂದ ಮತ್ತೆ ಮಳೆ ತನ್ನ ಆರ್ಭಟ ತೋರಿಸುವ ಸಾಧ್ಯತೆ ಇದೆ. ಸೆ.15ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಬಾಗಲಕೋಟೆ, ವಿಜಯಪುರದಲ್ಲಿ ಭಾರೀ ಮಳೆಯಾಗಲಿದೆ. ಅದು ಗುಡುಗು ಸಹಿತ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿಯಲ್ಲಿ ಸೆ.14 ರಿಂದ ಎರಡು ದಿನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಕೋಲಾರ ಭಾಗದಲ್ಲಿ ಸೆ. 16, 17ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.