newsics.com
ನವದೆಹಲಿ: ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ ಪ್ರಧಾನಿ ಮೋದಿ ಮಣಿಪುರಕ್ಕೆ ಇಂದು ಭೇಟಿ ನೀಡುತ್ತಿದ್ದಾರೆ.
2023ರ ಮೇ ತಿಂಗಳಿನಿಂದ ಮೊದಲು ಮಣಿಪುರವನ್ನು ಭೇಟಿಯಾಗದಿರುವ ಪ್ರಧಾನಿ ಮೋದಿ, ಈ ಭೇಟಿಯ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಸಾರ್ವಜನಿಕ ಸಭೆಗಳನ್ನು ನಡೆಸಿ, ಸಂಘರ್ಷದಿಂದ ನೊಂದಿರುವ ಕುಟುಂಬದೊಂದಿಗೆ ಸಂವಾದ ನಡೆಸುವ ಯೋಜನೆಯಲ್ಲಿದ್ದಾರೆ. ಈ ಭೇಟಿ ರಾಜ್ಯದ ಜನರಲ್ಲಿ ಶಾಂತಿ ಮತ್ತು ಅಭಿವೃದ್ಧಿಯ ನಿರೀಕ್ಷೆಗಳನ್ನು ಹೆಚ್ಚಿಸಿದೆ
ಕುಕಿಗಳು ಬಹುಸಂಖ್ಯಾತರಾಗಿರುವ ಚುರಾಚಂದ್ಪುರದ ಪೀಸ್ ಗ್ರೌಂಡ್ನಲ್ಲಿ 7,300 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಇವತ್ತು ಅಡಿಪಾಯ ಹಾಕಲಿದ್ದಾರೆ. ಇದಾದ ಮೇಲೆ ಮೈಥೇಯಿ ಬಹುಸಂಖ್ಯಾತ ಜನರು ಇರುವ ಇಂಫಾಲ್ನಲ್ಲಿ ಒಟ್ಟು 1,200 ಕೋಟಿ ರೂಪಾಯಿಗಳ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.