Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Desire to become a woman ಹೆಣ್ಣಾಗುವ ಬಯಕೆ: ಜನನಾಂಗವನ್ನೇ ಕತ್ತರಿಸಿಕೊಂಡ ಯುವಕ!
ದೇಶಪ್ರಮುಖ

Desire to become a woman ಹೆಣ್ಣಾಗುವ ಬಯಕೆ: ಜನನಾಂಗವನ್ನೇ ಕತ್ತರಿಸಿಕೊಂಡ ಯುವಕ!

Share
2 Min Read
SHARE

newsics.com

ಪ್ರಯಾಗ್‌ರಾಜ್: 20 ವರ್ಷದ ಯುವಕನೊಬ್ಬ ಹೆಣ್ಣಾಗುವ ಬಯಕೆಯಿಂದ ತನ್ನ ಜನನಾಂಗವನ್ನೇ ಕತ್ತರಿಸಿಕೊಂಡ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.

ಮನೆಯಲ್ಲೇ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡ ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಮೇಥಿ ಜಿಲ್ಲೆಯ ಮೂಲದ ಈ ವ್ಯಕ್ತಿ ಆನ್‌ಲೈನ್‌ನಲ್ಲಿ ಸಿಕ್ಕ ಸ್ಥಳೀಯ ವೈದ್ಯರ ಸಲಹೆಯ ಮೇರೆಗೆ ಈ ಕಠಿಣ ಹೆಜ್ಜೆ ಇಟ್ಟಿದ್ದಾನೆ ಎನ್ನಲಾಗಿದೆ.

ಸ್ವರೂಪ್ ರಾಣಿ ನೆಹರು (ಎಸ್‌ಆರ್‌ಎನ್) ಆಸ್ಪತ್ರೆಯ ಡಾ. ಸಂತೋಷ್ ಸುದ್ದಿಗಾರರೊಂದಿಗೆ ಮಾತನಾಡಿ, ಯಾರೋ ನೀಡಿದ ಸಲಹೆಯನ್ನು ಅನುಸರಿಸಿ ಆ ವ್ಯಕ್ತಿ ಸರ್ಜಿಕಲ್ ಬ್ಲೇಡ್ ಬಳಸಿ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಖಾಸಗಿ ಅಂಗವನ್ನು ಕತ್ತರಿಸಿಕೊಂಡ ಕಾರಣ ಸಾಕಷ್ಟು ರಕ್ತ ನಷ್ಟವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಆತನಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ಸಂತೋಷ್ ಹೇಳಿದರು.

ತಾನು ಪುರುಷ ದೇಹವನ್ನು ಹೊಂದಿದ್ದರೂ, ಹೆಣ್ಮಕ್ಕಳ ಹಾಗೆ ಭಾವನೆಯನ್ನು ಹೊಂದಿದ್ದೇನೆ. ಧ್ವನಿ, ನಡವಳಿಕೆ, ನಡಿಗೆ ಹೆಣ್ಮಕ್ಕಳ ಹಾಗೆ ಇದು ಎಂದು ಯುವಕ ವೈದ್ಯರ ಬಳಿ ಹೇಳಿಕೊಂಡಿದ್ದಾಗಿ ವರದಿಯಾಗಿದೆ.

ತನ್ನ 14ನೇ ವಯಸ್ಸಿನಲ್ಲಿ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಹುಡುಗಿಯರೊಂದಿಗೆ ನೃತ್ಯ ಮಾಡುವಾಗ ತಾನು ಮೊದಲು ಇಂಥ ಭಾವನೆ ಮೂಡಿತು ಎಂದು ಯುವಕ ವೈದ್ಯರಿಗೆ ತಿಳಿಸಿದ್ದಾನೆ.

ಹುಡುಗನಾಗಿದ್ದರೂ, ತಾನು ಹುಡುಗಿಯಿರಬಹುದು ಎಂದು ಅನಿಸುತ್ತಿತ್ತಂತೆ. ಒಬ್ಬನೇ ಮಗನಾದ್ದರಿಂದ ಅವನು ತನ್ನ ಹೆತ್ತವರೊಂದಿಗೆ ಇದನ್ನು ಎಂದಿಗೂ ಹಂಚಿಕೊಳ್ಳಲಿಲ್ಲ. ನಂತರ, ಪದವಿ ಸಮಯದಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಅವನು ಪ್ರಯಾಗ್‌ರಾಜ್‌ಗೆ ತೆರಳಿದನು.

ಪ್ರಯಾಗ್‌ರಾಜ್‌ನ ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಿದ್ದ ಆ ವ್ಯಕ್ತಿ, ಆನ್‌ಲೈನ್‌ನಲ್ಲಿ ವಿಡಿಯೊಗಳನ್ನು ವೀಕ್ಷಿಸುತ್ತಿದ್ದ ಮತ್ತು ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಸ್ಥಳೀಯ ವೈದ್ಯರನ್ನು ಸಂಪರ್ಕಿಸಿದ್ದ ಎನ್ನಲಾಗಿದೆ. ಸ್ವತಃ ತನಗೆ ತಾನೇ ಅರಿವಳಿಕೆ ಚುಚ್ಚುಮದ್ದು ನೀಡಿ, ಶಸ್ತ್ರಚಿಕಿತ್ಸಾ ಬ್ಲೇಡ್ ಬಳಸಿ ಲಿಂಗ ಕತ್ತರಿಸಿಕೊಂಡಿದ್ದಾನೆ. ಆದರೆ, ಅರಿವಳಿಕೆ ಕಡಿಮೆಯಾದ ತಕ್ಷಣ ಅವನಿಗೆ ಅಸಹನೀಯ ನೋವು ಕಾಣಿಸಿತು. ಆತನ ಸ್ಥಿತಿ ಹದಗೆಟ್ಟಾಗ ತಮ್ಮ ಮನೆ ಮಾಲೀಕರ ಸಹಾಯವನ್ನು ಕೋರಿದ್ದಾನೆ. ಕೂಡಲೇ ಅವರು ಆತನನ್ನು ಆಸ್ಪತ್ರೆಗೆ ಕರೆದೊಯ್ದರು.

ಅರಿವಳಿಕೆ ಚುಚ್ಚುಮದ್ದಿನ ಪ್ರಭಾವ ಇದ್ದ ವೇಳೆ ನನಗೆ ಹೆಚ್ಚು ನೋವು ಅನಿಸಲಿಲ್ಲ. ಬಳಿಕ ನೋವು ಅಸಹನೀಯವಾಯಿತು. ಇದರಿಂದ ರಕ್ತಸ್ರಾವ ಉಲ್ಬಣಗೊಂಡಿತು. ನಂತರ ನಾನು ಮನೆ ಮಾಲೀಕರ ಸಹಾಯವನ್ನು ಕೋರಿದೆ. ಅವರು ನನ್ನನ್ನು ಆಸ್ಪತ್ರೆಗೆ ಕರೆತಂದರು ಎಂದು ಯುವಕ ಹೇಳಿದ್ದಾನೆ.

ಆತನ ತಾಯಿ ಗೋಗರೆಯುತ್ತಾ ಆಸ್ಪತ್ರೆ ತಲುಪಿದ್ದಾರೆ. ಅವನು ನಮ್ಮ ಒಬ್ಬನೇ ಮಗ. ನಾವು ಹೆಚ್ಚು ವಿದ್ಯಾವಂತರಲ್ಲ. ಅವನು ಐಎಎಸ್ ಅಧಿಕಾರಿಯಾಗುತ್ತಾನೆಂದು ಆಶಿಸಿ ಅವನನ್ನು ಪ್ರಯಾಗ್‌ರಾಜ್‌ಗೆ ಕಳುಹಿಸಿದೆವು. ಅವನು ಈ ರೀತಿ ಮಾಡುತ್ತಾನೆಂದು ನನಗೆ ತಿಳಿದಿರಲಿಲ್ಲ ಎಂದು ಅಳುತ್ತಾ ಹೇಳಿದ್ದಾರೆ.

ಚಲಿಸುತ್ತಿದ್ದ ಬಿಎಂಟಿಸಿ ಬಸ್ ಗೆ ಬೆಂಕಿ : ತಪ್ಪಿದ ದುರಂತ

TAGGED:Desire to become a woman: A young man cut off his genitals!
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ಬಿಎಂಟಿಸಿ ಬಸ್ ಗೆ ಬೆಂಕಿ : ತಪ್ಪಿದ ದುರಂತ
Next Article No water, no power ಬೆಂಗಳೂರಲ್ಲಿ ಇನ್ನೂ 60 ಗಂಟೆ ನೀರಿಲ್ಲ, ಹಲವೆಡೆ ವಿದ್ಯುತ್ ಕೂಡ‌ ಇಲ್ಲ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?