newsics.com
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರಾಖಂಡದಲ್ಲಿ ಭೀಕರ ಪರಿಸ್ಥಿತಿ ಉಂಟಾಗಿದೆ. ಉಕ್ಕಿ ಹರಿಯುವ ನದಿಗಳು ಮತ್ತು ತೊರೆಗಳು ಮನೆಗಳು, ರಸ್ತೆಗಳು ಮತ್ತು ಸೇತುವೆಗಳನ್ನು ಕೊಚ್ಚಿಕೊಂಡು ಹೋಗಿವೆ. ಈ ದುರಂತದಲ್ಲಿ ಹಲವು ಸಾವು ನೋವುಗಳು ಸಂಭವಿಸಿದೆ.
ಈ ದುರಂತದಲ್ಲಿ ಇದುವರೆಗೆ ಸುಮಾರು 18 ಜನರು ಸಾವನ್ನಪ್ಪಿದ್ದು, 16 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಆದರೆ, ರಕ್ಷಣಾ ತಂಡಗಳು ಸುಮಾರು 900 ಜನರನ್ನು ರಕ್ಷಿಸಿದ್ದಾರೆ.
ಉತ್ತರಾಖಂಡ ಸರ್ಕಾರವು ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳ ಆರ್ಥಿಕ ನೆರವು ಮತ್ತು ಶವಗಳನ್ನು ಗೌರವಯುತವಾಗಿ ಗ್ರಾಮಗಳಿಗೆ ಕೊಂಡೊಯ್ಯುವ ಭರವಸೆ ನೀಡಿದ್ದಾರೆ.