newsics.com
ಹುಡುಗಿಗಾಗಿ ಎಎಸ್ಐ ಪುತ್ರ ನಡುರಸ್ತೆಯಲ್ಲಿ ಗೆಳೆಯನೊಂದಿಗೆ ಹೊಡೆದಾಡಿಕೊಂಡ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ದೂರು ಪ್ರತಿದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಶನಿವಾರ ಮಧ್ಯಾಹ್ನ ASI ಪುತ್ರ ಅರ್ಮಾನ್ ಮತ್ತು ಸೈಯದ್ ಅಜರುದ್ದೀನ್ ಇಬ್ಬರು ಜೊತೆಯಾಗಿ ಒಂದೇ ಬೈಕ್ನಲ್ಲಿ ಅಂಜಿನಪ್ಪ ಬಡಾವಣೆಯ ಬೇಕರಿ ಬಳಿ ಬಂದಿದ್ದಾರೆ. ಈ ವೇಳೆ ಹುಡುಗಿಯ ವಿಷಯಕ್ಕಾಗಿ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ನೋಡ ನೋಡುತ್ತಿದ್ದಂತೆ ಅರ್ಮಾನ್ ಮತ್ತು ಸೈಯದ್ ಅಜರುದ್ಧೀನ್ ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದಾರೆ.
ಅರ್ಮಾನ್ ಸಂಬಂಧಿಯಾಗಿರುವ ಯುವತಿಯೊಂದಿಗೆ ಸೈಯದ್ ಅಜರುದ್ದೀನ್ ಮಾತನಾಡುತ್ತಿದ್ದನು. ಇದೇ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ನಡುರಸ್ತೆಯಲ್ಲಿ ಯುವಕರಿಬ್ಬರು ಹೊಡೆದಾಡಿಕೊಂಡಿದ್ದಾರೆ.