newsics.com
ಬೆಂಗಳೂರು : ಸಾಹಸನ ಸಿಂಹ ಡಾ.ವಿಷ್ಣುವರ್ಧನ್ ಅವರ 25 ಅಡಿ ಎತ್ತರ ಪ್ರತಿಮೆ ಬೆಂಗಳೂರಿನಲ್ಲಿ ನಿರ್ಮಾಣವಾಗಲಿದ್ದು, ಈ ಕುರಿತು ನಟ ಕಿಚ್ಚ ಸುದೀಪ್ ಸೋಶಿಯಲ್ ಮೀಡಿಯಾದಲ್ಲಿ ನೀಲಿನಕ್ಷೆ ಬಿಡುಗಡೆ ಮಾಡಿದ್ದಾರೆ.
ನಟ ವಿಷ್ಣುವರ್ಧನ್ ಅವರ 75 ನೇ ಹುಟ್ಟುಹಬ್ಬದ ಅಂಗವಾಗಿ ಈ ಯೋಜನೆ ಸಿದ್ದಪಡಿಸಲಾಗಿದೆ. ಸುದೀಪ್, ಉದ್ಯಮಿ ಅಶೋಕ್ ಖೇಣಿ, ಡಾ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಜೊತೆಗೂಡಿ ಈ ಜಾಗ ಖರೀದಿಸಿದ್ದಾರೆ.
ಈ ಸ್ಥಳದಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆ, ಪುಸ್ತಕ ಬಂಡಾರ, ಫೋಟೋ ಗ್ಯಾಲರಿ ನಿರ್ಮಾಣ ಮಾಡಲಾಗುತ್ತದೆ. ಪ್ರತಿದಿನ ಸಂಜೆ 6 :30 ಕ್ಕೆ ಲೇಸರ್ ಶೋ ಕೂಡ ನಡೆಯಲಿದೆ. ಕ್ಷೇತ್ರದ ನಿರ್ಮಾಣಕ್ಕಾಗಿ 500 ಅಭಿಮಾನಿಗಳಿಂದ ದೇಣಿಗೆ ಸಂಗ್ರಹ ಮಾಡಲಾಗುವುದು. 1 ವರ್ಷದಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುತ್ತದೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.