newsics.com
ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆಯಿಂದ ಅ.7 ವರೆಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ರಜೆಯ ಅವಧಿಯು ದಸರಾ ಹಬ್ಬ, ಗಾಂಧಿ ಜಯಂತಿ ಮತ್ತು ವಾಲ್ಮೀಕಿ ಜಯಂತಿ ರಜೆಗಳನ್ನು ಒಳಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ಕರ್ನಾಟಕದ ಎಲ್ಲಾ ಶಾಲಾ ಮಕ್ಕಳಿಗೆ ಈ ರಜೆ ಅನ್ವಯಿಸುತ್ತದೆ. ಈ ಬಗ್ಗೆ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದ್ದು, ನಾಳೆಯಿಂದ ಅಂದರೆ ಸೆ. 20 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ಒಟ್ಟು 18 ದಿನ ಹಬ್ಬದ ರಜೆ ಘೋಷಿಸಿದೆ. ಆದರೆ ಕಡ್ಡಾಯವಾಗಿ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ರಜೆಯು ರಾಜ್ಯದ ಎಲ್ಲಾ ಶಾಲೆಗಳಿಗೆ ಅನ್ವಯವಾಗಲಿದ್ದು, ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಂದ ವಿರಾಮ ಸಿಗಲಿದೆ.