newsics.com
ಬೆಂಗಳೂರು : ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ವಿಶೇಷ ಮೇಲ್ಮನವಿ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆಗಾಗಿ ಅರ್ಜಿದಾರರ ಪರ ವಕೀಲ ಎಚ್ ಎಸ್ ಗೌರವ್ ಅವರು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ ಆರ್ ಗವಾಯಿ ಅವರ ಪೀಠದ ಮುಂದೆ ಮನವಿ ಮಾಡಿದ್ದರು
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ನಂತರ ಗೌರವ್ ಎಂಬ ವಕೀಲರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.