newsics.com
ಬಳ್ಳಾರಿ: ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.
ಪಾರ್ವತಮ್ಮ ತಮ್ಮ 15 ತಿಂಗಳುಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ತಮ್ಮ ಮನೆಯ ಮುಖ್ಯದ್ವಾರಕ್ಕೆ ಸಿಎಂ ಸಿದ್ದರಾಮಯ್ಯ ಭಾವಚಿತ್ರದ ಕೆತ್ತನೆ ಮಾಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯಗೆ ವಿನೂತನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮುಖ್ಯದ್ವಾರ ವೀಕ್ಷಣೆಗಾಗಿ ಪಕ್ಕದ ಊರಿನಿಂದ ಜನ ಆಗಮಿಸುತ್ತಿದ್ದಾರೆ.
ತಮ್ಮ ಆರ್ಥಿಕ ಸಮಸ್ಯೆಯಿಂದ ಬಾಗಿಲು ದುರಸ್ಥಿ ಮಾಡಲು ಸಾಧ್ಯವಾಗಿರಲಿಲ್ಲ, ಇದೀಗ ಗೃಹಲಕ್ಷ್ಮೀ ಯೋಜನೆ ಅವರಿಗೆ ಕೈಹಿಡಿದ್ದು, ಈ ಹಣಕಾಸಿನಿಂದ ಅವರು ನೂತನ ಬಾಗಿಲನ್ನು ಹಾಕಿಸಿಕೊಂಡಿದ್ದಾರೆ.
ಮನೆಯ ಮುಂಬಾಗಿಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಹಾಕುವುದರ ಜೊತೆಗೆ, ದಂಪತಿ ಹೊಸ ಬಾಗಿಲಿನ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ನೆಟ್ಟಿಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.