Subscribe NewsicsKannada/YouTube
newsics.com
ನವದೆಹಲಿ: ರಾಜ್ಯದ ರಾಜಕೀಯದಲ್ಲಿ ಹಲವು ಪ್ರಮುಖ ಬೆಳವಣಿಗೆಗಳು ದಾಖಲಾಗಿದ್ದು, ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹಮದ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಒಂದು ರೌಂಡ್ ದೆಹಲಿಗೆ ಹೋಗಿ ಬಂದಿದ್ದಾರೆ.
ಇದೀಗ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಬಗ್ಗೆ ಮುಖ್ಯಸಚೇತಕ ಸಲೀಂ ಅಹಮದ್ ಅವರು ಮಾಹಿತಿ ಬಹಿರಂಗಪಡಿಸಿದ್ದಾರೆ.
ಶೀಘ್ರದಲ್ಲೇ ಸಂಪುಟ ಪುನರ್ ರಚನೆ
ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್ ಅವರು ನವದೆಹಲಿಯಲ್ಲಿ ಮಾತನಾಡಿ, ನವೆಂಬರ್ ತಿಂಗಳಲ್ಲಿ ಸಂಪುಟ ಪುನರ್ ರಚನೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಒಟ್ಟು ಶೇ.50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನದಿಂದ ಹೊರಬರುವವರಿಗೆ ಪಕ್ಷದ ಸಂಘಟನೆ ಕೆಲಸ ವಹಿಸಲಾಗುತ್ತದೆ ಎಂದು ಅವರು ಹೇಳಿದರು. ಮುಂದುವರೆದು ಮಾತನಾಡಿ ಎರಡು ದಶಕಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಮನೆಯಲ್ಲಿ ಈ ದುರದೃಷ್ಟಕರ ಸಸ್ಯಗಳು ಇದ್ರೆ ಬಡತನ, ಅಶುಭ ಉಂಟಾಗೋದು ಗ್ಯಾರಂಟಿ!