Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
ಯಾದಗಿರಿ : ಪತಿಯೋರ್ವ ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಶರಣಪ್ಪ ಎಂಬಾತ ಈ ಕೃತ್ಯ ಎಸಗಿದ್ದು, ತನ್ನ ಮೂವರ ಮಕ್ಕಳ ಪೈಕಿ ಇಬ್ಬರನ್ನು ಕೊಂದಿದ್ದಾನೆ. ಕೊಲೆಯಾದ ಮಕ್ಕಳನ್ನು ಭಾರ್ಗವ್ (5) ಹಾಗೂ ಸಾನ್ವಿ (3) ಎಂದು ಗುರುತಿಸಲಾಗಿದೆ. ಹಿರಿಯ ಮಗ ಹೇಮಂತ್ (8) ಕೊಲೆಗೂ ಶರಣಪ್ಪ ಯತ್ನಿಸಿದ್ದು, ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ಎಸ್ಕೇಪ್ ಆಗಿದ್ದಾನೆ. ಏನೂ ಅರಿಯದ ಮುಗ್ದ ಕಂದಮ್ಮಗಳು ಜೀವ ಬಿಟ್ಟಿದೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಯಾದಗಿರಿ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.