Subscribe NewsicsKannada/ YouTube
newsics.com
ಕೋಲಾರ: ಕುಟುಂಬದ ಭಯದಿಂದ ಅಪ್ರಾಪ್ತ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ.
ಮುಂಜಾನೆ ಎದ್ದು ತನ್ನ ತಾಯಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ತಾನು ಪ್ರೀತಿಸಿದ್ದ ಹುಡುಗಿಯೊಂದಿಗೆ ನಿರ್ಜನ ಪ್ರದೇಶದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮನೆಯವರು ತಮ್ಮ ಪ್ರೀತಿಯನ್ನು ವಿರೋಧಿಸಬಹುದು ಎಂದು ಊಹಿಸಿ ಬ್ಯಾಟರಾಯನಹಳ್ಳಿ ತಾಲೂಕಿನ ಹೊರವಲಯದಲ್ಲಿ ಒಬ್ಬರನ್ನೊಬ್ಬರು ತಬ್ಬಿಕೊಂಡು ರೈಲಿಗೆ ತಲೆಕೊಟ್ಟಿದ್ದಾರೆ.
ಆಗಿದ್ದೇನು?
ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಪಣಮಾಕನಹಳ್ಳಿ ಶ್ವೇತ (17) ಮೃತ ಪ್ರೇಮಿಗಳು. ಶ್ವೇತ ಅಪ್ರಾಪ್ತೆಯಾಗಿದ್ದು, ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರು. ಪ್ರೀತಿಗೆ ಮನೆಯವರು ಒಪ್ಪಿಗೆ ನೀಡುವುದಿಲ್ಲ ಎಂದು ತಿಳಿದುಇಬ್ಬರೂ ಆತ್ಮಹತ್ಯಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಇಬ್ಬರ ಪ್ರೀತಿಯ ಬಗ್ಗೆ ಎರಡು ಕುಟುಂಬದವರು ನಮಗೆ ಮಾಹಿತಿ ಇಲ್ಲ ಎಂದು ಹೇಳುತ್ತಿದ್ದಾರೆ. ಶ್ವೇತ ಮಾಲೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇತ್ತೀಚೆಗೆ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ. ಸತೀಶ್ ಇತ್ತೀಚೆಗಷ್ಟೇ ಮಾಲೂರಲ್ಲಿ ಐಟಿಐ ವ್ಯಾಸಂಗ ಮುಗಿಸಿ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ. ಶ್ವೇತ ಸಹ ಪಿಯುಸಿ ಮುಗಿಸಿ ಪದವಿ ವ್ಯಾಸಂಗಕ್ಕೆ ಮಾಲೂರು ಪಟ್ಟಣಕ್ಕೆ ತೆರಳುತ್ತಿದ್ದಳು. ಸತೀಶ ಕಳೆದ ನಾಲ್ಕು ತಿಂಗಳಿನಿಂದ ಕೂಲಿ ಕೆಲಸ ಮಾಡಿಕೊಂಡಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.