Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Death toll rises ಕರೂರ್ ಕಾಲ್ತುಳಿತ: ಮೃತರ ಸಂಖ್ಯೆ 38ಕ್ಕೇರಿಕೆ, 150ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು, ನ್ಯಾಯಾಂಗ ತನಿಖೆಗೆ ಆದೇಶ
ದೇಶಪ್ರಮುಖ

Death toll rises ಕರೂರ್ ಕಾಲ್ತುಳಿತ: ಮೃತರ ಸಂಖ್ಯೆ 38ಕ್ಕೇರಿಕೆ, 150ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು, ನ್ಯಾಯಾಂಗ ತನಿಖೆಗೆ ಆದೇಶ

Share
2 Min Read
SHARE

Subscribe NewsicsKannada/YouTube

newsics.com

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ನಟ- ರಾಜಕಾರಣಿ ವಿಜಯ್ ದಳಪತಿ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿತಕ್ಕೆ 16 ಮಹಿಳೆಯರು ಮತ್ತು ಎಂಟು ಮಕ್ಕಳು ಸೇರಿದಂತೆ ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ.

ಕರೂರ್ ಮತ್ತು ತಿರುಚ್ಚಿಯಾದ್ಯಂತ 150ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನಿಷ್ಠ ಹತ್ತು‌ ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಕ್ಕಳನ್ನು ಹೊರತುಪಡಿಸಿ ಬಹುತೇಕ ಮೃತರು ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಿಗರಾಗಿದ್ದರು.

ರ‍್ಯಾಲಿಗಾಗಿ ಕನಿಷ್ಠ ಆರು ಗಂಟೆಗಳ ಕಾಲ ಕಾದಿದ್ದರು. ಸ್ಥಳಕ್ಕೆ ರ‍್ಯಾಲಿ ತಡವಾಗಿ ಬಂದಿತು. ಹೀಗಾಗಿ, ಹೆಚ್ಚಿನ ಜನಸಂದಣಿ ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಹ್ಮಣಿಯನ್ ಕರೂರಿಗೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ಜಿಲ್ಲಾ ಕಾರ್ಯದರ್ಶಿ ವಿ. ಸೆಂಥಿಲ್‌ ಬಾಲಾಜಿ ಅವರಿಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರು, ತಮ್ಮ ನಾಯಕನಿಗಾಗಿ ಸುಮಾರು ಆರು ಗಂಟೆಗಳಿಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಆದರೆ, ದಳಪತಿ ವಿಜಯ್ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದ್ದರು.

ಸ್ಥಳದಲ್ಲೇ 10ಕ್ಕೂ ಹೆಚ್ಚು ಮಂದಿ ಸಾವು:
ರ‌್ಯಾಲಿಯ ಸಂದರ್ಭದಲ್ಲಿ ಅಲ್ಲಿ ಸೇರಿದ್ದ ಜನಸಮೂಹದ ಒಂದು ಭಾಗ ಮುಂದಕ್ಕೆ ಬಂದ ನಂತರ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. ಮಕ್ಕಳು ಸೇರಿದಂತೆ ಹಲವರಿದ್ದವರು. ಈ ವೇಳೆ ಕಾಲ್ತುಳಿತ ಸಂಭವಿಸುತ್ತಿದ್ದಂತೆ ಜನದಟ್ಟಣೆಯಲ್ಲಿ ಹಲವರು ಮೂರ್ಛೆ ಹೋದರು. ಈ ವೇಳೆ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಒಂಬತ್ತು ವರ್ಷದ ಬಾಲಕಿ ಕಾಣೆಯಾಗಿದ್ದಾಳೆಂದು ವರದಿಯಾಗಿದೆ.

ತಡವಾಗಿ ಆಗಮಿಸಿದ ವಿಜಯ್ ದಳಪತಿ ಅವರನ್ನು ನೋಡಲು, ಅವರ‌ ಮಾತು‌ ಕೇಳಲು ಹಲವರು ಮರ ಹತ್ತಿದ್ದರು. ವಿಜಯ್ ದಳಪತಿ ಮಾತನಾಡಲಾರಂಭಿಸಿದ ಕೆಲವೇ ಸಮಯದಲ್ಲಿ ವಿಜಯ್ ಅವರಿದ್ದ ವ್ಯಾನ್ ಹಿಂಭಾಗದಲ್ಲಿ ಮರದ ಕೊಂಬೆಗಳು‌ ಮುರಿದುಬಿದ್ದವು. ಇದರಿಂದ ನೂಕುನುಗ್ಗಲು ಉಂಟಾಯಿತು ಎಂದು ಪ್ರತ್ಯಕ್ಷದರ್ಶಿಗಳ ಹೇಳಿಕೆ ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಹತ್ತು ಲಕ್ಷ ರೂ. ಪರಿಹಾರ:

ಮೃತರ ಕುಟುಂಬಕ್ಕೆ ಹತ್ತು‌ ಲಕ್ಷ ಪರಿಹಾರ ಘೋಷಿಸಿರುವ ಸಿಎಂ ಸ್ಟಾಲಿನ್, ಗಾಯಾಳುಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ.

ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಸರ್ಕಾರ, ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಭಾನುವಾರ (ಸೆ.28) ಸ್ಟಾಲಿನ್ ಅವರು ದುರಂತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ವಿಜಯ್ ದಳಪತಿ ವಿರುದ್ಧ ಕೇಸ್ ದಾಖಲಿಸುವ ಸಾಧ್ಯತೆಯಿದೆ. ಕೇಸ್ ದಾಖಲಿಸಿ ವಿಜಯ್ ದಳಪತಿ‌ ಅವರನ್ನು ಬಂಧಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಬೆಡ್‌ರೂಮ್‌ನಲ್ಲಿ ಅಶ್ಲೀಲ ವಿಡಿಯೋ ಭಂಗಿ ಅನುಕರಿಸುವಂತೆ ಪೀಡಿಸುತ್ತಿದ್ದ ಗಂಡನನ್ನು ಕೊಂದ ಹೆಂಡತಿ

ಕರ್ನಾಟಕ ಲೇಖಕಿಯರ ಸಂಘಕ್ಕೆ ನಾಲ್ವರು ರಾಜೀನಾಮೆ

Navaratri special ನವರಾತ್ರಿಯ ಕೊನೆಯ ಮೂರು ದಿನ ಈ ಮಹಿಳೆಯರು ಪೂಜೆ, ಉಪವಾಸ ಮಾಡಬಾರದೇಕೆ?

ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾ*ಚಾರ – ವಿಡಿಯೋ ಮಾಡಿ ಬೆದರಿಕೆ

TAGGED:Karur stampede: Death toll rises to 38over 150 hospitalized
Share This Article
Facebook Twitter Copy Link Print
Previous Article ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾ*ಚಾರ – ವಿಡಿಯೋ ಮಾಡಿ ಬೆದರಿಕೆ
Next Article GOOD MORNING |Today’s Horoscope ಇಂದಿನ ರಾಶಿ ಭವಿಷ್ಯ, 28-09-2025, ಭಾನುವಾರ, ಹಣಕಾಸಿನಲ್ಲಿ ಪ್ರಗತಿ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?