Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ತಮಿಳುನಾಡಿನ ಕರೂರಿನಲ್ಲಿ ನಡೆದ ತಮ್ಮ ರ್ಯಾಲಿಯಲ್ಲಿ 39 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಕಾಲ್ತುಳಿತದ ನಂತರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಮೊದಲ ಪ್ರಕ್ರಿಯೆ ನೀಡಿದ್ದಾರೆ.
ಮಾರಣಾಂತಿಕ ಘಟನೆಯ ನಂತರದ ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ, ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ವಿಜಯ್ ಸಂತಾಪ ಸೂಚಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
“ನನ್ನ ಹೃದಯ ಛಿದ್ರವಾಗಿದೆ; ನಾನು ಅಸಹನೀಯ, ವರ್ಣನಾತೀತ ನೋವು ಮತ್ತು ದುಃಖದಲ್ಲಿ ನರಳುತ್ತಿದ್ದೇನೆ,” ಎಂದು ಅವರು ಎಕ್ಸ್ನಲ್ಲಿ ಹೇಳಿದ್ದು, ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪ ಮತ್ತು ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ತ್ವರಿತ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.