Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ನಾಡ ಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ನೋಡಲು ಹೋಗುವವರಿಗೆ ಕೆ.ಎಸ್.ಆರ್.ಟಿ.ಸಿ. ಶಾಕ್ ನೀಡಿದೆ. ಬಸ್ ದರ ಏಕಾಏಕಿ ಏರಿಕೆ ಮಾಡಿ ಆದೇಶ ಹೊರಡಿಸಿದೆ.
ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್ ದರ ಏರಿಕೆಯಾಗಿದೆ. ಟಿಕೆಟ್ ದರ 19 ರೂಪಾಯಿ ಹೆಚ್ಚಳ ಮಾಡಲಾಗಿದೆ.
ದಸರಾ ಹಬ್ಬಕ್ಕೂ ಮುನ್ನ ಬಸ್ ಟಿಕೆಟ್ ದರ 161 ರೂಪಾಯಿ ಇತ್ತು. ಇದೀಗ 19 ರೂಪಾಯಿ ಏರಿಕೆಯಾಗಿದ್ದು, ಬೆಂಗಳೂರು-ಮೈಸೂರು ಬಸ್ ಟಿಕೆಟ್ ದರ 180ಕ್ಕೆ ಏರಿಕೆಯಾಗಿದೆ.