Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅಪ್ಡೇಟ್ ನೀಡಿದ್ದಾರೆ.
ಈ ಕುರಿತಾಗಿ ಮಾತನಾಡಿದ ಅವರು, ಖರ್ಗೆ ಅವರಿಗೆ ಪೇಸ್ಮೇಕರ್ ಅನ್ನು ಯಶಸ್ವಿಯಾಗಿ ಅಳವಡಿಸಲಾಯಿತು. ಇದೊಂದು ಸಣ್ಣ ಶಸ್ತ್ರಚಿಕಿತ್ಸೆ, ಅವರು ಆರೋಗ್ಯವಾಗಿದ್ದಾರೆ’. ಸಾಕಷ್ಟು ಜನ ಖರ್ಗೆ ಅವರಿಗೆ ಏನಾಗಿದೆ ಅಂತ ಕರೆ ಮಾಡುತ್ತಿದ್ದರು ಅವರು ಸ್ಟೇಬಲ್ ಆಗಿದ್ದಾರೆ. ಯಾವುದೇ ರೀತಿಯ ಚಿಂತೆ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಸಹಜವಾಗಿ ಓಡಾಟ ಹೆಚ್ಚಿದೆ. ಅವರ ಮೇಲೆ ದೊಡ್ಡ ಜವಬ್ದಾರಿ ಸಹಾ ಇದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಈ ವಾತಾವರಣದಲ್ಲಿ ಜವಾಬ್ದಾರಿಯನ್ನು ನಿರ್ವಹಿಸುವುದು ಸ್ವಲ್ಪ ಕಷ್ಟ. ಯಾರೆ ಆದರೂ ಕಷ್ಟಾನೇ . ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎರಡು ಮೂರು ದಿನದ ವಿಶ್ರಾಂತಿ ಅಗತ್ಯ ಇದೆ. ಎರಡು ಮೂರು ದಿನ ಆದ ಮೇಲೆ ಬಂದು ಭೇಟಿ ಆದರೆ ಒಳ್ಳೆಯದು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.