Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ದೇವರಗುಡ್ಡ: ದೇವರಗುಡ್ಡದಲ್ಲಿ ನಡೆದ ಬಡಿಗೆ ಬಡಿದಾಟ ಜಾತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ದೇವರಗುಡ್ಡದಲ್ಲಿರುವ ಮಾಳ ಮಲ್ಲೇಶ್ವರ ಸನ್ನಿಧಿಯಲ್ಲಿ ವಿಜಯದಶಮಿ ದಿನ ವಿಶಿಷ್ಟ ಜಾತ್ರೆ ನಡೆಯುತ್ತದೆ. ಜಾತ್ರೆಯ ದಿನ ಬಡಿಗೆ ಹಿಡಿದು ಒಬ್ಬರಿಗೊಬ್ಬರು ಹೊಡೆದುಕೊಂಡು ವಿಜಯದಶಮಿ ಆಚರಣೆ ಮಾಡಲಾಗುತ್ತದೆ. ಅರಕೇರ ಮತ್ತು ನೇರಣಕಿ ಗ್ರಾಮದ ಜನರು ಮಾಳ ಮಲ್ಲೇಶ್ವರನ ಉತ್ಸವ ಮೂರ್ತಿಯನ್ನ ತಮ್ಮ, ತಮ್ಮ ಊರುಗಳಿಗೆ ಒಯ್ಯಲು ಬಡಿಗೆ ಹಿಡಿದು ಬಡಿದಾಡುತ್ತಾರೆ.
ನಿನ್ನೆಯ ಜಾತ್ರೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಭಾಗಿಯಾಗಿದ್ದರು. ಹೊಡೆದಾಟದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅವರಲ್ಲಿ ಇಬ್ಬರು ಇದೀಗ ಪ್ರಾಣ ಕಳೆದುಕೊಂಡಿದ್ದಾರೆ