Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಮೊದಲ ದಿನವೇ ಬಿಗ್ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದ ತುಳುನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಇದೀಗ ಮರಳಿ ಬಂದಿದ್ದಾರೆ. ತಮ್ಮನ್ನು ಹೊರಹಾಕಿದ ಸ್ಪರ್ಧಿಗಳನ್ನು ಪ್ರಶ್ನಿಸಲು ರಣಚಂಡಿಯ ರೂಪದಲ್ಲಿ ಮತ್ತೆ ಮನೆ ಪ್ರವೇಶಿಸಿದ್ದಾರೆ.
ಮೊದಲ ದಿನವೇ ಎಲಿಮಿನೇಟ್ ಆಗಿದ್ದ ತುಳು ನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಮರಳಿ ಬಂದಿದ್ದಾರೆ. ರಕ್ಷಿತಾ ಶೆಟ್ಟಿ ಅವರನ್ನು ಮನೆಯಲ್ಲಿರುವ ಒಂಟಿಗಳು ನಾಮಿನೇಟ್ ಮಾಡಿದ್ದರು. ಇದೀಗ ವೇದಿಕೆ ಮೇಲೆ ಆಗಮಿಸಿರುವ ರಕ್ಷಿತಾ ಅಕ್ಷರಶಃ ರಣಚಂಡಿಯಾಗಿದ್ದಾರೆ.
ಮನೆಯಿಂದ ಹೊರಗಡೆ ಹೋಗುವಾದ ಸಮಾಧಾನ ಮಾಡೋದಕ್ಕೆ ಬಂದಿದ್ದರು. ತಮ್ಮ ನಿರ್ಧಾರದ ಬಗ್ಗೆ ಸ್ಟ್ಯಾಂಡ್ ತೆಗೆದುಕೊಳ್ಳಲು ಬಂದಿರಲಿಲ್ಲ. ಈಗ ಮನೆಯೊಳಗೆ ಹೋಗಿ ಪ್ರಾಪರ್ ರೀಸನ್ ಕೇಳುತ್ತೇನೆ ಎಂದು ರಕ್ಷಿತಾ ಶೆಟ್ಟಿ ಗುಡುಗಿದ್ದರು.
ನಾನು ಹೇಗೆ ಆಟ ಆಡುತ್ತೇನೆ ಎಂದು ಅವರಿಗೆ ಗೊತ್ತಿಲ್ಲ. ಕೇವಲ ಪುಸ್ತಕದ ಕವರ್ ನೋಡಿ ಜಡ್ಜ್ ಮಾಡಿದ್ದರು. ಅವರಿಗಿಂತ ಮನೆಯಲ್ಲಿರಲು ನನಗೆ ಯೋಗ್ಯತೆ ಇದೆ ಎಂದು ರಕ್ಷಿತಾ ಹೇಳಿದ್ದಾರೆ. ಸುದೀಪ್ ಸಹ ಮನೆಯೊಳಗೆ ಹೋಗುತ್ತಿರುವ ರಕ್ಷಿತಾ ಶೆಟ್ಟಿ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
https://www.instagram.com/reel/DPYlUd1jPX5/?igsh=cDI0czg0a29zZ2k1