Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ಪಚ್ಚಮಲ್ಲ ಅಲಿಯಾಸ್ ಸಣ್ಣ ನನ್ನು ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲೂಕು ಪಚ್ಚಮಲ್ಲ ಗ್ರಾಮದ ನಿವಾಸಿಯಾಗಿದ್ದಾನೆ. ಪಚ್ಚಮಲ್ಲನ ನಾಲ್ವರು ಸಹಚರರಾದ ಗಣೇಶ, ಗೋವಿಂದೇಗೌಡ ಹಾಗೂ ಮಂದೆ ಕುರಿ ಮೇಯಿಸುತ್ತಿದ್ದ ಮಂಜುನಾಥ, ಕಂಬಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ.
ಪಚ್ಚಮಲ್ಲನ ಹಸುವನ್ನು ಹುಲಿ ಬೇಟೆಯಾಡಿ ಕೊಂದು ಭಕ್ಷಣೆ ಮಾಡಿದ್ದು, ತಾನು ಸಾಕಿದ ಹಸುವನ್ನು ಕೊಂದಿದ್ದಕ್ಕೆ,ಹುಲಿಯನ್ನು ಕೊಲ್ಲಲಾಗಿದೆ ಎಂದು ತನಿಖೆಯಲ್ಲಿ ಬಯಲಾಗಿದೆ. ಅಲ್ಲದೇ ಮೃತ ಹುಲಿಯ ಇನ್ನುಳಿದ ಕಳೆಬರವನ್ನ ಅರಣ್ಯ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ. ಹುಲಿಯ ತಲೆ ಹಾಗು ಮುಂಗಾಲು ಮಣ್ಣಿನಲ್ಲಿ ಹೂಳಲಾಗಿತ್ತು. ಹುಲಿಯ ಮಧ್ಯ ಭಾಗದ ದೇಹವನ್ನು ಎಲೆಗಳಲ್ಲಿ ಮುಚ್ಚಿಟ್ಟಲಾಗಿತ್ತು. ಹುಲಿಯ ಹಿಂಭಾಗದ ದೇಹವನ್ನು ಮರದ ಕೆಳಗೆ ಎಸೆಯಲಾಗಿತ್ತು.