Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ಬೆಂಗಳೂರಿನ ವರದಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಗಣತಿದಾರರು ಸ್ಟಿಕ್ಕರ್ ಅಂಟಿಸಿ ಹೋಗಿರುವ ಘಟನೆ ನಡೆದಿದೆ.
ದೇಗುಲಕ್ಕೆ ಸ್ಟಿಕ್ಕರ್ ಅಂಟಿಸಿರೋದು ನಿರ್ಲಕ್ಷ್ಯ , ದೇವರಿಗೆ ಸಮೀಕ್ಷೆ ಮಾಡಲು ಮುಂದಾಗಿರಬೇಕು ಎಂದು ಅರ್ಚಕರು ಹೇಳಿದ್ದಾರೆ. ರಾಜ್ಯಾದ್ಯಂತ ಜಾತಿ ಗಣತಿ ಸಮೀಕ್ಷೆ ಗಡುವು ಅ.12 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಆನ್ ಲೈನ್ ನಲ್ಲಿ ಕೂಡ ಸಮೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ.
ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಈ ಸಮೀಕ್ಷೆಯು ಅಕ್ಟೋಬರ್ 12 ರವರೆಗೆ ನಡೆಯಲಿದೆ.