Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಅಕ್ಟೋಬರ್ 10ರಂದು ರಾಜ್ಯದಾದ್ಯಂತ ಹಗುರಿನಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ಬೀಸುವ ಸಾಧ್ಯತೆಯಿದೆ.
ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಬೆಳಗಾವಿ, ವಿಜಯಪುರ, ರಾಯಚೂರು, ಬೀದರ್, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರಿನಲ್ಲೂ ಮಳೆ ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡುಗಳಲ್ಲಿ ಅಕ್ಟೋಬರ್ 8ರಿಂದ 10ರವರೆಗೆ ತೀವ್ರ ಮಳೆ, ಕರಾವಳಿ ಪ್ರದೇಶಗಳಲ್ಲಿ ಅಕ್ಟೋಬರ್ 12ರವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಗಾಳಿ ವೇಗ 30-40 ಕಿ.ಮೀ. ಪ್ರಮಾಣದಲ್ಲಿ ಬೀಸುವ ಸಾಧ್ಯತೆ ಇದೆ.
ಅಕ್ಟೋಬರ್ 15ರವರೆಗೆ ತೀವ್ರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ರಾಜ್ಯದ ಉತ್ತರ ಒಳನಾಡುಗಳಲ್ಲಿ ಗುಡುಗು ಮತ್ತು ಗಾಳಿಯೊಂದಿಗೆ ಮಳೆಯ ಚಟುವಟಿಕೆ ಹೆಚ್ಚಾಗುತ್ತದೆ. ಕೆಎಸ್ಎನ್ಡಿಎಂಸಿ ಹಿಂದಿನ ವರದಿಗಳ ಪ್ರಕಾರ, ಈ ಸಮಯದಲ್ಲಿ ಮಳೆಯಿಂದಾಗಿ ರಾಜ್ಯದಲ್ಲಿ ಪ್ರವಾಹದಂತಹ ಸಂಕಟಗಳು ಎದುರಾಗಬಹುದು. ನಿವಾಸಿಗಳು ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತವಾಗಿ ಇರಬೇಕು ಎಂದು ಸಲಹೆ ನೀಡಲಾಗಿದೆ.