Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಚಿಕ್ಕಬಳ್ಳಾಪುರ: ಯುವಕನೋರ್ವ ತನ್ನ ಅಪ್ರಾಪ್ತೆ ಪ್ರೇಯಸಿ ವೇಲ್ ನಿಂದಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬಾಲಕುಂಟಹಳ್ಳಿ ಗ್ರಾಮದ ಬಳಿ ನಡೆದಿದೆ.
ಬಾಲಕುಂಟಹಳ್ಳಿಯ ನಿವಾಸಿ ಚಿರುತ್ ಕುಮಾರ್ ( 18) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದು ಬಂದಿದೆ. ಆದ್ರೆ, ಸಾಯುವ ಮುನ್ನ ಮಿಸ್ ಯು ಚಿನ್ನ ಅಂತ ಹುಡುಗಿ ಜೊತೆಗಿನ ಪೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆಕೆಯ ವೇಲ್ ನಿಂದಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯದಿಂದಲೇ ಚಿರುತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ,
ಚಿರುತ್ ಊರಲ್ಲೇ ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದ ಚಿರುತ್ ಕುಮಾರ್ ಇದ್ದಕ್ಕಿದ್ದಂತೆ ಜಕ್ಕಲಮಡುಗು ಜಲಾಶಯದ ಬಳಿ ಇರುವ ಜಮೀನು ಪಕ್ಕದಲ್ಲೇ ಇದ್ದ ಹೊಂಗೆ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಸಲಿಗೆ ಚಿರುತ್ ಕುಮಾರ್ ಅದ್ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನಿಗೆ ಏನಾಗಿತ್ತು ಎನ್ನುವುದು ಮಾತ್ರ ಯಾರಿಗೂ ಗೊತ್ತಿರಲಿಲ್ಲ. ಆದ್ರೆ ಆತನ ಮೊಬೈಲ್ ಸ್ಟೇಟಸ್ ಹಾಗೂ ಸಾಮಾಜಿಕ ಜಾಲತಾಣದ ಅಕೌಂಟ್ ನಲ್ಲಿ ತನ್ನ ಸಾವಿನ ಸುಳಿವು ನೀಡಿದ್ದಾನೆ. ಅಪ್ರಾಪ್ತೆಯ ಜೊತೆ ಇರೊ ಪ್ರೀತಿ-ಪ್ರೇಮದ ಪೋಟೊಗಳನ್ನು ಶೇರ್ ಮಾಡಿದ್ದು, ಮಿಸ್ ಯೂ ಚಿನ್ನಾ ಅಂತ ಬರೆದುಕೊಂಡಿದ್ದಾನೆ. ಹೀಗಾಗಿ ಪ್ರೇಮ ವೈಪಲ್ಯದಿಂದ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.
ಭಾರತದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ನಟಿ ‘ದೀಪಿಕಾ ಪಡುಕೋಣೆ’ ನೇಮಕ