Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಕಲಬುರಗಿ : ಕಲಬುರಗಿಯಲ್ಲಿ ಮೂರು ತಿಂಗಳಿಂದ ಸಂಬಳವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಗ್ರಂಥಾಲಯ ಮೇಲ್ವಿಚಾರಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೇಡಂ ತಾಲೂಕಿನ ಮಳಖೇಡ ಗ್ರಾಮದ ಅರಿವು ಕೇಂದ್ರದಲ್ಲೇ ಡೆತ್ನೋಟ್ ಬರೆದಿಟ್ಟು ಸೋಮವಾರ ನೇಣಿಗೆ ಕೊರಳೊಡ್ಡಿದ್ದಾರೆ.
ಭಾಗ್ಯವತಿ ಅಗ್ಗಿಮಠ (40) ಸಾವಿಗೆ ಶರಣಾದವರು ಎಂದು ಗುರುತಿಸಲಾಗಿದೆ. ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಆರು ವರ್ಷಗಳಿಂದ ಅರಿವು ಕೇಂದ್ರದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಅವರು ಕೆಲಸ ಮಾಡ್ತಿದ್ದರು.
ಈ ಹಿಂದಿನ ಮೂರು ತಿಂಗಳ ಸಂಬಳ ಬಂದಿರಲಿಲ್ಲ. ಗ್ರಾಮ ಪಂಚಾಯಿತಿ ಕಚೇರಿಗೆ ಸಾಕಷ್ಟು ಬಾರಿ ಅಲೆದಾಡಿದರೂ ಸ್ಪಂದನೆ ಸಿಕ್ಕಿಲ್ಲ. ವೇತನವಿಲ್ಲದೆ ಕುಟುಂಬ ನಿರ್ವಹಣೆ, ಮಕ್ಕಳ ಶಾಲಾ ಶುಲ್ಕ ಪಾವತಿಸಲು ಪರದಾಡುತ್ತಿದ್ದರು. ಆರ್ಥಿಕವಾಗಿ ತೀವ್ರ ತೊಂದರೆ ಅನುಭವಿಸಿದ್ದರಿಂದ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.