Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಉಡುಪಿ: ಸಮುದ್ರದಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಮಕ್ಕಳು ನೀರು ಪಾಲಾದ ಘಟನೆ ಹೊಸಹಿತ್ಲು ಬೀಚ್ ನಲ್ಲಿ ನಡೆದಿದೆ.
ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್ ನಲ್ಲಿ ಘಟನೆ ನಡೆದಿದೆ. ಸಂಕೇತ್(16), ಸೂರಜ್(15), ಆಶಿಶ್(14) ನೀರು ಪಾಲಾದ ಮಕ್ಕಳು. ಸದ್ಯ ಮೂವರು ಮಕ್ಕಳ ಮೃತದೇಹ ಪತ್ತೆಯಾಗಿದೆ.
ಮೃತರಲ್ಲಿ ಓರ್ವ ಪಿಯುಸಿ ವಿದ್ಯಾರ್ಥಿಯಾಗಿದ್ರೆ, ಮತ್ತಿಬ್ಬರು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಘಟನೆ ನಡೆದ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.