Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಕಾಂತಾರ 1 ಯಶಸ್ಸಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಟೆಂಪಲ್ ರನ್ ಮಾಡುತ್ತಿದ್ದು, ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟ ಚಾಮುಂಡೇಶ್ವರಿಯ ದರ್ಶನ್ ಪಡೆದಿದ್ದಾರೆ.
ರಿಷಭ್ ಶೆಟ್ಟಿ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು ಡಿವೈನ್ ಸ್ಟಾರ್ನನ್ನು ನೋಡಿ ಎಕ್ಸೈಟ್ ಆಗಿದ್ದಾರೆ. ಚಾಮುಂಡೇಶ್ವರಿ ದರ್ಶನ ಪಡೆದು ತೆರಳಿದ ನಟ ರಿಷಭ್ ಶೆಟ್ಟಿ ನಂತರ ಮಾತನಾಡಿದ್ದಾರೆ.ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದೇನೆ. ಕಾಂತಾರ 1 ಯಶಸ್ವಿಯಾಗಿದೆ. ನಮ್ಮ ತಂಡದ ಶ್ರಮ ಜನಗಳು ಒಪ್ಪಿದ್ದಾರೆ. ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಕಾಂತಾರ ಬಂದಾಗ ಜನರು ಇಷ್ಟ ಪಟ್ಟಿದ್ದರು.ಗಳಿಕೆ ಬಗ್ಗೆ ನಾನು ಮಾತನಾಡಲ್ಲ ಎಂದಿದ್ದಾರೆ.
ನಾನು ಸಣ್ಣ ಊರಿನಿಂದ ಬಂದವನು. ಕರ್ನಾಟಕದಿಂದ ವಿಶ್ವಾದ್ಯಂತ ಸಿನಿಮಾ ಜನ ಇಷ್ಟ ಪಟ್ಟಿದ್ದಾರೆ. ಇದು ಚಿತ್ರರಂಗಕ್ಕೆ ಒಳ್ಳೆ ಬೆಳವಣಿಗೆ. ಇದು ಇನ್ನೂ ಹೆಚ್ಚಿನ ಶಕ್ತಿ ಕೊಡತ್ತೆ. ಮುಂದಿನ ಚಿತ್ರ ಜೈ ಹನುಮಾನ್ ಮಾಡ್ತಿದೀನಿ ಎಂದಿದ್ದಾರೆ.